ಮೈಸೂರು ನಗರ

ರೇಷ್ಮೆ ಕೃಷಿಯಿಂದ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ : ವೈ.ಟಿ.ತಿಮ್ಮಯ್ಯ

ಮೈಸೂರು : ಯಾವ ಕೃಷಿ ರೈತನಿಗೆ ಹೆಚ್ಚಿನ ಲಾಭ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸುತ್ತದೋ ಅದಕ್ಕೆ ರೈತ ಮಾರು ಹೋಗುತ್ತಾರೆ. ಅಂತಹ ಕೃಷಿಯಲ್ಲಿ ರೇಷ್ಮೆ ಕೃಷಿಯೂ ಒಂದಾಗಿದೆ ಎಂದು ರಾಜ್ಯ ರೇಷ್ಮೆ ನಿರ್ದೇಶನಾಲಯದ ಅಪರ ನಿರ್ದೇಶಕ ವೈ.ಟಿ.ತಿಮ್ಮಯ್ಯ ತಿಳಿಸಿದರು.

ಮೈಸೂರು ವಿವಿ ಮಾನಸಗಂಗೋತ್ರಿಯ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಸಭಾಂಗಣದಲ್ಲಿ ಮೈಸೂರು ವಿವಿ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ಮಾಳವೀಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರ ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ದ್ವಿತಳಿ ರೇಷ್ಮೆಗೂಡು ಬೆಳೆದರೆ ವಿದೇಶಿ ಮಾರುಕಟ್ಟೆ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ. ಆಧುನಿಕ ತಾಂತ್ರಿಕತೆ ಬಳಕೆಯಿಂದ ರೇಷ್ಮೆ ಹುಳುಗಳಿಗೆ ರೋಗಗಳ ಹಾವಳಿ ಇಲ್ಲ. ರೈತರು ವೈಜ್ಞಾನಿಕ ಪದ್ಧತಿಗಳಿಂದ ಕಡಿಮೆ ಖರ್ಚಿನಿಂದ ಹೆಚ್ಚು ಲಾಭ ಗಳಿಸಬಹುದಾಗಿದೆ. ರೈತರು ಕೃಷಿಗೆ ಪೂರಕವಾದ ರೇಷ್ಮೆ ಕೃಷಿಗೆ ಸುಧಾರಿತ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:-ಬೆಂಗಳೂರು | ಹಾಡಹಗಲೇ 7.11 ಕೋಟಿ ರೂ. ದರೋಡೆ

ಮೈಸೂರು ವಿ.ವಿ ಕುಲಸಚಿವರಾದ ಎಂ.ಕೆ.ಸವಿತಾ ಮಾತನಾಡಿ, ಯಾವುದೇ ಒಂದು ಕಾರ್ಯಾಗಾರ, ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗಲಿದೆ. ಎರಡು ದಿನಗಳ ಈ ವಿಚಾರ ಸಂಕಿರಣ ಆಯೋಜನೆ ಶ್ಲಾಘನೀಯವಾಗಿದ್ದು, ಉತ್ಸಾಹದಿಂದ ಭಾಗವಹಿಸಿ ಎಂದು ಸಲಹೆ ನೀಡಿದರು.

ರೇಷ್ಮೆ ಕೃಷಿ ಮಾಡಿಕೊಂಡು ಶಾಲಾ-ಕಾಲೇಜುಗಳಿಗೆ ಹೋಗುತ್ತಿದ್ದ ವಿದ್ಯಾರ್ಥಿಗಳು ರೇಷ್ಮೆ ಕೃಷಿಯನ್ನು ಸಂಪೂರ್ಣವಾಗಿ ಮರೆತು ನಗರದತ್ತ ಮುಖ ಮಾಡಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ರೇಷ್ಮೆ ಕೃಷಿ ಎಂದರೆ ಚಿನ್ನದ ಬೆಳೆ ಬೆಳೆದಂತೆ. ಸರತಿ ಸಾಲಿನಲ್ಲಿ ನಿಂತು ಮೈಸೂರು ಸಿಲ್ಕ್ ಸೀರೆಗಳನ್ನು ತೆಗೆದುಕೊಳ್ಳು ತ್ತಾರೆ. ಒಮ್ಮೆ ತೆಗೆದುಕೊಂಡರೆ ಪೀಳಿಗೆಗಳಿಗೂ ವರ್ಗಾವಣೆ ಆಗುತ್ತಾ ಇರುತ್ತದೆ. ಹಾಗೆಯೇ ಗುಡಿ ಕೈಗಾರಿಕೆಗಳಲ್ಲಿ ರೇಷ್ಮೆಗೂಡುಗಳನ್ನು ಬಳಸಿ ಜೀವನ ಕಂಡುಕೊಳ್ಳಬಹುದಾಗಿದೆ ಎಂದರು.

ಮೈಸೂರು ವಿ.ವಿ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಸಣ್ಣಪ್ಪ, ಪ್ರೊ.ಆರ್.ಎಸ್.ಉಮಾಕಾಂತ್, ಪ್ರೊ.ಎಂ.ಎನ್.ಅನಿಲ್‌ಕುಮಾರ್, ಪ್ರೊ.ಟಿ.ಎಸ್.ಜಗದೀಶ್ ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

7 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

9 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

9 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

10 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

10 hours ago