ಮೈಸೂರು ನಗರ

ರೇಷ್ಮೆ ಕೃಷಿಯಿಂದ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ : ವೈ.ಟಿ.ತಿಮ್ಮಯ್ಯ

ಮೈಸೂರು : ಯಾವ ಕೃಷಿ ರೈತನಿಗೆ ಹೆಚ್ಚಿನ ಲಾಭ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸುತ್ತದೋ ಅದಕ್ಕೆ ರೈತ ಮಾರು ಹೋಗುತ್ತಾರೆ. ಅಂತಹ ಕೃಷಿಯಲ್ಲಿ ರೇಷ್ಮೆ ಕೃಷಿಯೂ ಒಂದಾಗಿದೆ ಎಂದು ರಾಜ್ಯ ರೇಷ್ಮೆ ನಿರ್ದೇಶನಾಲಯದ ಅಪರ ನಿರ್ದೇಶಕ ವೈ.ಟಿ.ತಿಮ್ಮಯ್ಯ ತಿಳಿಸಿದರು.

ಮೈಸೂರು ವಿವಿ ಮಾನಸಗಂಗೋತ್ರಿಯ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಸಭಾಂಗಣದಲ್ಲಿ ಮೈಸೂರು ವಿವಿ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ಮಾಳವೀಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರ ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ದ್ವಿತಳಿ ರೇಷ್ಮೆಗೂಡು ಬೆಳೆದರೆ ವಿದೇಶಿ ಮಾರುಕಟ್ಟೆ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ. ಆಧುನಿಕ ತಾಂತ್ರಿಕತೆ ಬಳಕೆಯಿಂದ ರೇಷ್ಮೆ ಹುಳುಗಳಿಗೆ ರೋಗಗಳ ಹಾವಳಿ ಇಲ್ಲ. ರೈತರು ವೈಜ್ಞಾನಿಕ ಪದ್ಧತಿಗಳಿಂದ ಕಡಿಮೆ ಖರ್ಚಿನಿಂದ ಹೆಚ್ಚು ಲಾಭ ಗಳಿಸಬಹುದಾಗಿದೆ. ರೈತರು ಕೃಷಿಗೆ ಪೂರಕವಾದ ರೇಷ್ಮೆ ಕೃಷಿಗೆ ಸುಧಾರಿತ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:-ಬೆಂಗಳೂರು | ಹಾಡಹಗಲೇ 7.11 ಕೋಟಿ ರೂ. ದರೋಡೆ

ಮೈಸೂರು ವಿ.ವಿ ಕುಲಸಚಿವರಾದ ಎಂ.ಕೆ.ಸವಿತಾ ಮಾತನಾಡಿ, ಯಾವುದೇ ಒಂದು ಕಾರ್ಯಾಗಾರ, ವಿಚಾರ ಸಂಕಿರಣಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗಲಿದೆ. ಎರಡು ದಿನಗಳ ಈ ವಿಚಾರ ಸಂಕಿರಣ ಆಯೋಜನೆ ಶ್ಲಾಘನೀಯವಾಗಿದ್ದು, ಉತ್ಸಾಹದಿಂದ ಭಾಗವಹಿಸಿ ಎಂದು ಸಲಹೆ ನೀಡಿದರು.

ರೇಷ್ಮೆ ಕೃಷಿ ಮಾಡಿಕೊಂಡು ಶಾಲಾ-ಕಾಲೇಜುಗಳಿಗೆ ಹೋಗುತ್ತಿದ್ದ ವಿದ್ಯಾರ್ಥಿಗಳು ರೇಷ್ಮೆ ಕೃಷಿಯನ್ನು ಸಂಪೂರ್ಣವಾಗಿ ಮರೆತು ನಗರದತ್ತ ಮುಖ ಮಾಡಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ರೇಷ್ಮೆ ಕೃಷಿ ಎಂದರೆ ಚಿನ್ನದ ಬೆಳೆ ಬೆಳೆದಂತೆ. ಸರತಿ ಸಾಲಿನಲ್ಲಿ ನಿಂತು ಮೈಸೂರು ಸಿಲ್ಕ್ ಸೀರೆಗಳನ್ನು ತೆಗೆದುಕೊಳ್ಳು ತ್ತಾರೆ. ಒಮ್ಮೆ ತೆಗೆದುಕೊಂಡರೆ ಪೀಳಿಗೆಗಳಿಗೂ ವರ್ಗಾವಣೆ ಆಗುತ್ತಾ ಇರುತ್ತದೆ. ಹಾಗೆಯೇ ಗುಡಿ ಕೈಗಾರಿಕೆಗಳಲ್ಲಿ ರೇಷ್ಮೆಗೂಡುಗಳನ್ನು ಬಳಸಿ ಜೀವನ ಕಂಡುಕೊಳ್ಳಬಹುದಾಗಿದೆ ಎಂದರು.

ಮೈಸೂರು ವಿ.ವಿ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಸಣ್ಣಪ್ಪ, ಪ್ರೊ.ಆರ್.ಎಸ್.ಉಮಾಕಾಂತ್, ಪ್ರೊ.ಎಂ.ಎನ್.ಅನಿಲ್‌ಕುಮಾರ್, ಪ್ರೊ.ಟಿ.ಎಸ್.ಜಗದೀಶ್ ಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

34 mins ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

46 mins ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

1 hour ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

1 hour ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

2 hours ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

2 hours ago