ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡೆಯಿಂದ ಜೆಡಿಎಸ್ನ 12 ರಿಂದ 13 ಶಾಸಕರು ಬೇಸರಗೊಂಡಿದ್ದಾರೆ. ಹೀಗಾಗಿ ಅವರನ್ನು ಒಗ್ಗೂಡಿಸುವ ಪ್ರಯತ್ನ ಶುರು ಮಾಡಿದ್ದೇನೆ ಎಂದು ಜೆಡಿಎಸ್ನ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ನ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದಾಗಿದೆ. ನಾನು ಈಗಲೂ ರಾಜ್ಯ ಘಟಕದ ಅಧ್ಯಕ್ಷನಾಗಿರುವುದರಿಂದ ಪಕ್ಷದ ಶಾಸಕರು ಹಾಗೂ ನಾಯಕರನ್ನು ಒಗ್ಗೂಡಿಸುವುದು ನನ್ನ ಕರ್ತವ್ಯವಾಗಿದೆ. ಅಲ್ಲದೇ ಹೀಗಿರುವ ಪಕ್ಷಕ್ಕೆ ಬೆಂಕಿ ಬಿದ್ದಿದ್ದು, ಶಾಸಕರೆಲ್ಲರೂ ತಮ್ಮ-ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕಿದೆ. ಹಾಗಾಗಿ ಪಕ್ಷದ ಶಾಸಕರೆಲ್ಲರೂ ಒಬ್ಬೋಬ್ಬರಾಗಿ ತಮ್ಮ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದಾರೆ.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈಗಲಾದರೂ ಎಚ್.ಡಿ.ಕುಮಾರಸ್ವಾಮಿ ಅವರು ಬುದ್ಧಿ ಕಲಿಯಬೇಕಿದ್ದು, ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಕಂಪನಿಯಾಗಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಪಕ್ಷ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…