ಮೈಸೂರು ನಗರ

ಡಿಕೆಶಿ ಸಿಎಂ ಆಗಬಾರದೆಂದು ಕುರುಬರನ್ನು ಒಂದುಗೂಡಿಸುವ ಕೆಲಸ: ಸಿದ್ದು ವಿರುದ್ಧ ಎಚ್.ವಿಶ್ವನಾಥ್‌ ವಾಗ್ದಾಳಿ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಬಹಳ ಒತ್ತಾಯವಿದೆ.‌ ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕುರುಬರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು, ಸಿದ್ದರಾಮಯ್ಯಗೆ ಈಗ ಸಂಕಷ್ಟ ಎದುರಾಗಿದೆ. ಅದಕ್ಕಾಗಿ ಕುರುಬರನ್ನು ಜೊತೆಗೂಡಿಸಲು ಹುನ್ನಾರ ನಡೆಸುತ್ತಿದ್ದಾರೆ. ಸಿದ್ದರಾಮಯ್ಯಗೆ ಆಸಕ್ತಿ ಇದ್ದರೆ ಮೊದಲೇ ಕ್ಯಾಬಿನೆಟ್‌ನಲ್ಲಿ ಇಟ್ಟು ಪಾಸ್ ಮಾಡಬೇಕಿತ್ತು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಇದನ್ನು ಶಿಫಾರಸ್ಸು ಮಾಡಿದ್ದರು. ಸಿದ್ದರಾಮಯ್ಯ ಸರ್ಕಾರ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರಕ್ಕೆ ಕಳುಹಿಸಿದೆ. ಆದರೆ ಅದು ಕಾನೂನು ಪ್ರಕಾರ ಸರಿಯಾದ ಕ್ರಮದಲ್ಲಿ ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿ : ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ಕಳ್ಳತನ ಪ್ರಕರಣ: ಮನೆ ಕೆಲಸದವರ ವಿಚಾರಣೆ

ಇನ್ನು ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂದು ಬಹಳ ಒತ್ತಾಯವಿದೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕುರುಬರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ. ತನು ಮನ ಧನ ಎಲ್ಲವೂ ಕುರುಬ ಸಮುದಾಯದಿಂದ ಅರ್ಪಣೆ ಆಗಿದೆ. ಆದರೆ ಸಮುದಾಯಕ್ಕೆ ಏನು ಮಾಡಿಲ್ಲ. ಸಮುದಾಯದಲ್ಲಿ ಯಾರನ್ನು ಬೆಳೆಸಲಿಲ್ಲ. ಕುರುಬ ಸಮುದಾಯದ ನಾಯಕತ್ವವನ್ನು ತುಳಿದಿದ್ದಾರೆ. ನನ್ನನ್ನು ಸೇರಿದಂತೆ ತುಳಿದಿದ್ದಾರೆ. ಯಾವ ಹೋರಾಟದಲ್ಲೂ ಯಾರಿಗೂ ಬೆಂಬಲ ಕೊಟ್ಟಿಲ್ಲ. ಕಷ್ಟದಲ್ಲಿದ್ದಾಗ ಸಮುದಾಯ ನಿಂತಿದೆ. ಆದರೆ ಚೆನ್ನಾಗಿರುವಾಗ ಸಿದ್ದರಾಮಯ್ಯ ಏನು ಮಾಡಲಿಲ್ಲ. ಕುರುಬರಿಗೆ, ಹಿಂದುಳಿದ ವರ್ಗಗಳಿಗೆ ದೇವರಾಜ ಅರಸು ಅವರು ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯರಿಂದ ಏನೂ ಆಗಿಲ್ಲ. ಹಿಂದುಳಿದ ವರ್ಗಕ್ಕೂ ಏನು ಮಾಡಿಲ್ಲ. ನಾಯಕ ಸಮುದಾಯವನ್ನು ಎಸ್ಟಿ ಮಾಡಿದ್ದು ದೇವೇಗೌಡರು. ಯಾವ ಹಿಂದುಳಿದ ಸಮುದಾಯಕ್ಕೂ ಏನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಮಾತು ಕೇಳಿ ಕುರುಬ ಸಮುದಾಯದ ಸ್ವಾಮೀಜಿಗಳು ಬೀದಿಗಿಳಿಯಬಾರದು. ಒಂದು ವೇಳೆ ಬೀದಿಗೆ ಬಂದರೆ ತಲೆದಂಡವಾಗಬೇಕಾಗುತ್ತದೆ ಹುಷಾರ್ ಎಂದು ಎಚ್ಚರಿಕೆ ನೀಡಿದರು. ನಿಮ್ಮನ್ನು ಸ್ವಾಮಿ ಮಾಡಿದ್ದೂ ನಾನು. ಮೊದಲ ಪೀಠಾಧ್ಯಕ್ಷ ಆಗಿದ್ದು ನಾನು. ಆದ್ದರಿಂದ ಸಿದ್ದರಾಮಯ್ಯ ಪರ ಯಾರೂ ಕೂಡ ಬೀದಿಗೆ ಬರಬೇಡಿ. ನೀವೆಲ್ಲ ಸಿದ್ದರಾಮಯ್ಯನ ಕಾಲಾಳುಗಳಲ್ಲ. ಕುರುಬ ಸಮುದಾಯದ ಕಟ್ಟಾಳುಗಳು ನೀವು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಪರ ಬೀದಿಗೆ ಬರಬಾರದು. ಬಂದರೆ ನಾವು ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನು ಸಿದ್ದರಾಮಯ್ಯಗೂ ಮಠಕ್ಕೂ ಏನು ಸಂಬಂಧವೇ ಇಲ್ಲ. ಮಠ ಕಟ್ಟಿದ ಮೇಲೆ ಸಿದ್ದರಾಮಯ್ಯ ಬಂದಿದ್ದು. ಸಿದ್ದರಾಮಯ್ಯ ಕುರುಬರಿಗೆ ಶಿಕ್ಷಣವನ್ನೂ ಕೊಡಲಿಲ್ಲ. ಎಸ್ ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣರಾದವರೇ ನಿಮ್ಮ ಜೊತೆ ಇರೋದು. ಕುರುಬರ ಕತೆ ಇಂಗ್ಲಿಷ್ ಸಿನಿಮಾದಂತೆ ಆಗಿದೆ. ಭಾಷೆ ಗೊತ್ತಿಲ್ಲದೇ ಸಿಳ್ಳೆ ಹೊಡೆದಂತೆ ಇರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago