ಮೈಸೂರು ನಗರ

ಜಾಗೃತಿ ಕೊರತೆ ಹಾಗೂ ನಿರ್ಲಕ್ಷ್ಯ: ಮೈಸೂರಿನಲ್ಲಿ ವಿದ್ಯುತ್‌ ಶಾಕ್‌ಗೆ 250 ಜನ ಹಾಗೂ 413 ಜಾನುವಾರುಗಳು ಸಾವು

ಮೈಸೂರು: ಎಲ್ಲರ ಬಾಳಿಗೆ ಬೆಳಕಾಗಬೇಕಾಗಿರುವ ವಿದ್ಯುತ್‌ ಹಲವರ ಪಾಲಿಗೆ ಮೃತ್ಯುಕೂಪವಾಗಿದ್ದು, ಜಾಗೃತಿ ಹಾಗೂ ನಿರ್ಲಕ್ಷ್ಯದಿಂದ ವಿದ್ಯುತ್‌ ಅವಘಡಕ್ಕೆ ನೂರಾರು ಜನ ಬಲಿಯಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ವಿದ್ಯುತ್‌ ಅವಘಡಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದ್ದು, ಜನರೊಂದಿಗೆ ಜಾನುವಾರುಗಳ ಸಾವು ಕೂಡ ಹೆಚ್ಚಾಗುತ್ತಿರುವುದು ಆತಂಕದ ವಿಷಯವಾಗಿದೆ.

ಮೈಸೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕಳೆದ ಐದು ವರ್ಷಗಳಲ್ಲಿ ವಿದ್ಯುತ್‌ ಅವಘಡದಿಂದ ಬರೋಬ್ಬರಿ 250 ಮಂದಿ ಬಲಿಯಾಗಿದ್ದಾರೆ.

ಇದರೊಂದಿಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ 413 ಜಾನುವಾರುಗಳು ಸಹ ಕರೆಂಟ್‌ ಶಾಕ್‌ ಹೊಡೆದು ಮೃತಪಟ್ಟಿವೆ. ಸಾಕಷ್ಟು ವಿದ್ಯುತ್‌ ಅವಘಡ ಪ್ರಕರಣಗಳಲ್ಲಿ ಸೆಸ್ಕ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುವಂತಾಗಿದೆ.

ಈ ಅವಘಡ ಸಂಭವಿಸಲು ಪ್ರಮುಖ ಕಾರಣಗಳನ್ನು ಬಹಿರಂಗಪಡಿಸಲಾಗಿದ್ದು, ವಿದ್ಯುತ್ ಹರಿಯುತ್ತಿರುವ ತಂತಿ ಸ್ಪರ್ಶಿಸುವುದು, ನೆಲದ ಮೇಲೆ ಬಿದ್ದಿರುವ ತಂತಿ ತುಳಿಯುವುದು, ತಿಳುವಳಿಕೆ ಇಲ್ಲದೇ ವಿದ್ಯುತ್‌ ಉಪಕರಣಗಳನ್ನು ಬಳಸುವುದು, ವಿದ್ಯುತ್‌ ವಾಹಕಗಳ ಮಾರ್ಗದ ಬಳಿ ಕಬ್ಬಿಣದ ಸರಳು, ತಗಡು ಸ್ಪರ್ಶಿಸುವುದು, ಅನವಶ್ಯಕವಾಗಿ ವಿದ್ಯುತ್‌ ಕೆಲಸ ಮಾಡುವುದು ಸೇರಿದಂತೆ ಇತ್ಯಾದಿ ಕಾರಣಗಳನ್ನು ಹೇಳಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

1 hour ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

1 hour ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

3 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago