ಮೈಸೂರು ನಗರ

ಮೈಸೂರಿನಲ್ಲಿ ನರೇಗಾದಡಿ ಉದ್ಯೋಗ ಕ್ರಾಂತಿ

ಮೈಸೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆಯ ಮೂಲಕ ಉದ್ಯೋಗ ಕ್ರಾಂತಿ ನಡೆಸಲು ಮುಂದಾಗಿರುವ ಮೈಸೂರು ಜಿಲ್ಲಾ ಪಂಚಾಯಿತಿ ಮಾನವ ದಿನಗಳಲ್ಲಿ ಶೇ.100ರಷ್ಟು ಗುರಿ ಸಾಧಿಸುವ ಮೂಲಕ ಗಮನ ಸೆಳೆದಿದೆ.

ಗ್ರಾಮೀಣ ಭಾಗದ ಜನರ ಜೀವನಕ್ಕೆ ಬಲವಾಗಿ ನಿಂತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಶೇ.101.83 ರಷ್ಟು ಗುರಿ ಸಾಧಿಸಿ ಮಾದರಿಯಾಗಿದೆ.

ಮೈಸೂರು ಜಿಲ್ಲೆಯಲ್ಲಿ 3,38,973 ಲಕ್ಷ ಕುಟುಂಬಗಳಿಗೆ ಜಾಬ್ ಕಾರ್ಡ್ ವಿತರಿಸಲಾಗಿದೆ. ಇವುಗಳಲ್ಲಿ 1,46,368 ಕುಟುಂಬಗಳ ಜಾಬ್ ಕಾರ್ಡ್ ಗಳು ಸಕ್ರಿಯವಾಗಿದ್ದು 277379 ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡಿರುವುದು ಸಾಧನೆ ಹಿಡಿದ ಕೈಗನ್ನಡಿಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು 24 ಲಕ್ಷ. ಮಾನವ ದಿನಗಳ ಗುರಿ ನಿಗಧಿಯಾಗಿತ್ತು ಇದರಲ್ಲಿ ಜಿಲ್ಲೆ 2443834 ಗುರಿ ಸಾಧಿಸಿದ್ದು ಶೇ.101.83 ರಷ್ಟು ಗುರಿ ಸಾಧಿಸಿದೆ

ಮೈಸೂರು ಜಿಲ್ಲಾವಾರು ನೋಡುವುದಾದರೆ ತಿ.ನರಸೀಪುರ 356975 ಮಾನವ ದಿನ ಗುರಿಯಲ್ಲಿ 402286 ಪೂರೈಸಿ ಶೇ.112.69ರಷ್ಟು ಸಾಧನೆ ಮಾಡಿದೆ. ಸರಗೂರು ತಾಲ್ಲೂಕು 176261 ಮಾನವ ದಿನ ಗುರಿಯಲ್ಲಿ 194478 ಪೂರೈಸಿ ಶೇ.110.34 ಸಾಧಿಸಿದ್ದು ಪಿರಿಯಾಪಟ್ಟಣ ತಾಲ್ಲೂಕು 314707 ಮಾನವ ದಿನ ಗುರಿಯಲ್ಲಿ 332733 ಮಾನವ ದಿನ ಸೃಷ್ಟಿಸಿ ಶೇ.105.73 ಸಾಧನೆ ಮಾಡಿದೆ ಸಾಲಿಗ್ರಾಮ ತಾಲ್ಲೂಕು 155098 ಮಾನವ ದಿನ ಗುರಿಯಲ್ಲಿ 161140 ಮಾನವ ದಿನ ಸೃಷ್ಟಿಸಿ ಶೇ.103.90 ರಷ್ಟು ಸಾಧನೆ ಮಾಡಿದೆ ಹಾಗೂ ಎಚ್.ಡಿ.ಕೋಟೆ ತಾಲ್ಲೂಕು 387119 ಮಾನವ ದಿನಗಳಿಗೆ 401055 ಮಾನವ ದಿನಗಳನ್ನು ಪೂರೈಸಿ ಶೇ.103.60 ಗುರಿ ಸಾಧಿಸಿದೆ.

ಆ ಮೂಲಕ ದುಡಿಯುವ ಕೈ ಕೂಲಿ, ತಾವಿರುವಲ್ಲೇ ಉದ್ಯೋಗ ನೀಡಿ ಜನರ ವಲಸೆ ತಪ್ಪಿಸಿ ಗ್ರಾಮೀಣ ಜನರ ಸಬಲೀಕರಣದ ಸಾಧನೆ ಮಾಡಿದೆ. ಅಂತರ್ಜಲ ಚೇತನ ಸಂರಕ್ಷಣೆ ಕಾಮಗಾರಿ, ರೈತರ ಕ್ರಿಯಾ ಯೋಜನೆ, ಹಸಿರೀಕರಣ ಕಾಮಗಾರಿ, ಶಾಲಾಭಿವೃದ್ಧಿ ಕಾಮಗಾರಿಗಳು, ಸಂಜೀವಿನಿ ಶೆಡ್ ನಿರ್ಮಾಣ, ಅಂಗನವಾಡಿ ಕಟ್ಟಡಗಳ ನಿರ್ಮಾಣ ಮಾಡಲಾಗಿದೆ.

ಇನ್ನು ರಸ್ತೆ ಕಾಮಗಾರಿ, ಚರಂಡಿ ಹಾಗೂ ಇನ್ನಿತರ ಸಮುದಾಯ ಮತ್ತು ವೈಯುಕ್ತಿಕ ಕಾಮಗಾರಿಗಳನ್ನು ಸೇರಿಸಲಾಗಿದೆ. ಇದರಿಂದ ಜನರಿಗೆ, ರೈತರಿಗೆ ಹಾಗೂ ಕೆಲಸ ಮಾಡುವವರಿಗೆ ಪ್ರಯೋಜನ ಸಿಗುತ್ತಿದೆ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

43 mins ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

47 mins ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

55 mins ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

59 mins ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

1 hour ago