ಮೈಸೂರು ನಗರ

ಮೈಸೂರಿನಲ್ಲಿ ನರೇಗಾದಡಿ ಉದ್ಯೋಗ ಕ್ರಾಂತಿ

ಮೈಸೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆಯ ಮೂಲಕ ಉದ್ಯೋಗ ಕ್ರಾಂತಿ ನಡೆಸಲು ಮುಂದಾಗಿರುವ ಮೈಸೂರು ಜಿಲ್ಲಾ ಪಂಚಾಯಿತಿ ಮಾನವ ದಿನಗಳಲ್ಲಿ ಶೇ.100ರಷ್ಟು ಗುರಿ ಸಾಧಿಸುವ ಮೂಲಕ ಗಮನ ಸೆಳೆದಿದೆ.

ಗ್ರಾಮೀಣ ಭಾಗದ ಜನರ ಜೀವನಕ್ಕೆ ಬಲವಾಗಿ ನಿಂತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಶೇ.101.83 ರಷ್ಟು ಗುರಿ ಸಾಧಿಸಿ ಮಾದರಿಯಾಗಿದೆ.

ಮೈಸೂರು ಜಿಲ್ಲೆಯಲ್ಲಿ 3,38,973 ಲಕ್ಷ ಕುಟುಂಬಗಳಿಗೆ ಜಾಬ್ ಕಾರ್ಡ್ ವಿತರಿಸಲಾಗಿದೆ. ಇವುಗಳಲ್ಲಿ 1,46,368 ಕುಟುಂಬಗಳ ಜಾಬ್ ಕಾರ್ಡ್ ಗಳು ಸಕ್ರಿಯವಾಗಿದ್ದು 277379 ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡಿರುವುದು ಸಾಧನೆ ಹಿಡಿದ ಕೈಗನ್ನಡಿಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು 24 ಲಕ್ಷ. ಮಾನವ ದಿನಗಳ ಗುರಿ ನಿಗಧಿಯಾಗಿತ್ತು ಇದರಲ್ಲಿ ಜಿಲ್ಲೆ 2443834 ಗುರಿ ಸಾಧಿಸಿದ್ದು ಶೇ.101.83 ರಷ್ಟು ಗುರಿ ಸಾಧಿಸಿದೆ

ಮೈಸೂರು ಜಿಲ್ಲಾವಾರು ನೋಡುವುದಾದರೆ ತಿ.ನರಸೀಪುರ 356975 ಮಾನವ ದಿನ ಗುರಿಯಲ್ಲಿ 402286 ಪೂರೈಸಿ ಶೇ.112.69ರಷ್ಟು ಸಾಧನೆ ಮಾಡಿದೆ. ಸರಗೂರು ತಾಲ್ಲೂಕು 176261 ಮಾನವ ದಿನ ಗುರಿಯಲ್ಲಿ 194478 ಪೂರೈಸಿ ಶೇ.110.34 ಸಾಧಿಸಿದ್ದು ಪಿರಿಯಾಪಟ್ಟಣ ತಾಲ್ಲೂಕು 314707 ಮಾನವ ದಿನ ಗುರಿಯಲ್ಲಿ 332733 ಮಾನವ ದಿನ ಸೃಷ್ಟಿಸಿ ಶೇ.105.73 ಸಾಧನೆ ಮಾಡಿದೆ ಸಾಲಿಗ್ರಾಮ ತಾಲ್ಲೂಕು 155098 ಮಾನವ ದಿನ ಗುರಿಯಲ್ಲಿ 161140 ಮಾನವ ದಿನ ಸೃಷ್ಟಿಸಿ ಶೇ.103.90 ರಷ್ಟು ಸಾಧನೆ ಮಾಡಿದೆ ಹಾಗೂ ಎಚ್.ಡಿ.ಕೋಟೆ ತಾಲ್ಲೂಕು 387119 ಮಾನವ ದಿನಗಳಿಗೆ 401055 ಮಾನವ ದಿನಗಳನ್ನು ಪೂರೈಸಿ ಶೇ.103.60 ಗುರಿ ಸಾಧಿಸಿದೆ.

ಆ ಮೂಲಕ ದುಡಿಯುವ ಕೈ ಕೂಲಿ, ತಾವಿರುವಲ್ಲೇ ಉದ್ಯೋಗ ನೀಡಿ ಜನರ ವಲಸೆ ತಪ್ಪಿಸಿ ಗ್ರಾಮೀಣ ಜನರ ಸಬಲೀಕರಣದ ಸಾಧನೆ ಮಾಡಿದೆ. ಅಂತರ್ಜಲ ಚೇತನ ಸಂರಕ್ಷಣೆ ಕಾಮಗಾರಿ, ರೈತರ ಕ್ರಿಯಾ ಯೋಜನೆ, ಹಸಿರೀಕರಣ ಕಾಮಗಾರಿ, ಶಾಲಾಭಿವೃದ್ಧಿ ಕಾಮಗಾರಿಗಳು, ಸಂಜೀವಿನಿ ಶೆಡ್ ನಿರ್ಮಾಣ, ಅಂಗನವಾಡಿ ಕಟ್ಟಡಗಳ ನಿರ್ಮಾಣ ಮಾಡಲಾಗಿದೆ.

ಇನ್ನು ರಸ್ತೆ ಕಾಮಗಾರಿ, ಚರಂಡಿ ಹಾಗೂ ಇನ್ನಿತರ ಸಮುದಾಯ ಮತ್ತು ವೈಯುಕ್ತಿಕ ಕಾಮಗಾರಿಗಳನ್ನು ಸೇರಿಸಲಾಗಿದೆ. ಇದರಿಂದ ಜನರಿಗೆ, ರೈತರಿಗೆ ಹಾಗೂ ಕೆಲಸ ಮಾಡುವವರಿಗೆ ಪ್ರಯೋಜನ ಸಿಗುತ್ತಿದೆ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ತಿಳಿಸಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ಮತ್ತೆ ಅರೆಸ್ಟ್‌ ಆದ ರಜತ್‌

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ. ರೀಲ್ಸ್‌…

35 mins ago

ಮೈಸೂರು| ಜಾತಿಗಣತಿ ವರದಿ ಬಿಡುಗಡೆಗೆ ಜಿಲ್ಲಾ ಒಕ್ಕಲಿಗರ ಸಂಘ ತೀವ್ರ ವಿರೋಧ

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ (District Vokkaliga…

47 mins ago

Mysuru : ತಾಯಿಯ ಆಸೆ ನೆರವೇರಿಸಿದ ನಟ ಪ್ರಭುದೇವ

ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ…

1 hour ago

ಮೈಸೂರು| ಮರ ಕಡಿದ ಸ್ಥಳದಲ್ಲೇ ಗಿಡ ನೆಟ್ಟ ಅನ್ನದಾತರು

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಬೃಹದಾಕಾರದ ಮರಗಳನ್ನು ಕಡಿದ ಪ್ರಕರಣ ಈಗ ಮೈಸೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ…

2 hours ago

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್‌ ನೀಡಿದ ಪೊಲೀಸರು

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳ ಹಿಂದೆ…

2 hours ago

ಮಂಡ್ಯ| ಹಣಕಾಸು ವಿಚಾರಕ್ಕೆ ಹಲ್ಲೆಗೊಳಗಾಗಿದ್ದ ಯುವಕ ಸಾವು

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ…

2 hours ago