ಕಿರಿಯ ಪವರ್ ಮ್ಯಾನ್ ಹುದ್ದೆಗೆ ಸಹನ ಶಕ್ತಿ ಪರೀಕ್ಷೆ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸಹನ ಶಕ್ತಿ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಯಿತು.

ನಗರದ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರೂ ಹಾಗೂ ಸೆಸ್ಕ್‌ ಅಧ್ಯಕ್ಷರೂ ಆದ ರಮೇಶ್‌ ಬಂಡಿಸಿದ್ದೇಗೌಡ ಅವರು, ಕಿರಿಯ ಪವರ್‌ಮ್ಯಾನ್‌ ನೇಮಕಾತಿ ಸಹನ ಶಕ್ತಿ ಪರೀಕ್ಷೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ನೇಮಕಾತಿ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸಿಬ್ಬಂದಿ ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮವಾಗಿ ಕೆಲಸ ಮಾಡಬೇಕು, ಆ ಮೂಲಕ ನಿಗಮಕ್ಕೆ ಒಳ್ಳೆಯ ಹೆಸರು ಬರುವಂತೆ ಕಾರ್ಯ ನಿರ್ವಹಿಸಬೇಕುಎಂದು ಹೇಳಿದರಲ್ಲದೆ, ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಗೆ ಶುಭ ಕೋರಿದರು.

ಮೇ 16ರವರೆಗೆ ಸಹನ ಶಕ್ತಿ ಪರೀಕ್ಷೆ
ನಿಗಮದಲ್ಲಿ ಖಾಲಿ ಇರುವ 309 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ 1:5 ಅನುಪಾತದಲ್ಲಿ ಸಹನ ಶಕ್ತಿ ಪರೀಕ್ಷೆ ಮೇ 12ರಿಂದ 16ರವರೆಗೆ ನಡೆಯಲಿದೆ. ಪ್ರಥಮ ಹಂತದ ಸಹನ ಶಕ್ತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಕಂಬ ಹತ್ತುವುದು, ಓಟ ಓಡುವುದು ಒಳಗೊಂಡಂತೆ ಐದು ಬಗೆಯ ಪರೀಕ್ಷೆ ನಡೆಸಲಾಗುವುದು. ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು, ಐದು ಪರೀಕ್ಷೆಗಳಲ್ಲಿ ಮೂರರಲ್ಲಿ ಅರ್ಹತೆಗಳಿಸಿಬೇಕಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂಕಗಳ ಮೆರಿಟ್ ಆಧಾರದಲ್ಲಿ 1:1 ಅನುಪಾತದ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ..

ಈ ಸಂದರ್ಭದಲ್ಲಿ ಮುಖ್ಯ ಇಂಜಿನಿಯರ್‌ ಡಿ.ಜೆ. ದಿವಾಕರ್‌, ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಮುಖ್ಯ ಆರ್ಥಿಕ ಅಧಿಕಾರಿ ರೇಣುಕಾ, ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಡಾ. ಬಿ.ಆರ್.‌ ರೂಪ, ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್‌ ಸೇರಿದಂತೆ ಇನ್ನಿತರರು ಇದ್ದರು.

ದಾಖಲಾತಿ ತರುವುದು ಕಡ್ಡಾಯ:
ಸಹನ ಶಕ್ತಿ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಎಲ್ಲ ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್‌ ಜೆರಾಕ್ಸ್‌ ಪ್ರತಿಯನ್ನು ಕಡ್ಡಾಯವಾಗಿ ತರಬೇಕಿದೆ.

“ಸಹನ ಶಕ್ತಿ ಪರೀಕ್ಷೆ ಮೂಲಕ ನಿಗಮಕ್ಕೆ ಆಯ್ಕೆಯಾಗುವ ಸಿಬ್ಬಂದಿ ಉತ್ತಮ ರೀತಿಯಲ್ಲಿ ಹಾಗೂ ತಮ್ಮ ಸುರಕ್ಷತೆಗೂ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು. ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮೆರಿಟ್‌ ಹಾಗೂ ಎಂಡುರೆನ್ಸ್‌ ಟೆಸ್ಟ್‌ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳಿಗೆ ಅನುಸಾರವಾಗಿ ನಡೆಸಲಾಗುತ್ತಿದೆ”. – ಕೆ.ಎಂ.ಮುನಿಗೋಪಾಲ್‌ ರಾಜು, ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್‌.

ಆಂದೋಲನ ಡೆಸ್ಕ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

8 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

13 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

17 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

23 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago