ಕಿರಿಯ ಪವರ್ ಮ್ಯಾನ್ ಹುದ್ದೆಗೆ ಸಹನ ಶಕ್ತಿ ಪರೀಕ್ಷೆ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸಹನ ಶಕ್ತಿ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಯಿತು.

ನಗರದ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರೂ ಹಾಗೂ ಸೆಸ್ಕ್‌ ಅಧ್ಯಕ್ಷರೂ ಆದ ರಮೇಶ್‌ ಬಂಡಿಸಿದ್ದೇಗೌಡ ಅವರು, ಕಿರಿಯ ಪವರ್‌ಮ್ಯಾನ್‌ ನೇಮಕಾತಿ ಸಹನ ಶಕ್ತಿ ಪರೀಕ್ಷೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ನೇಮಕಾತಿ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸಿಬ್ಬಂದಿ ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮವಾಗಿ ಕೆಲಸ ಮಾಡಬೇಕು, ಆ ಮೂಲಕ ನಿಗಮಕ್ಕೆ ಒಳ್ಳೆಯ ಹೆಸರು ಬರುವಂತೆ ಕಾರ್ಯ ನಿರ್ವಹಿಸಬೇಕುಎಂದು ಹೇಳಿದರಲ್ಲದೆ, ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಗೆ ಶುಭ ಕೋರಿದರು.

ಮೇ 16ರವರೆಗೆ ಸಹನ ಶಕ್ತಿ ಪರೀಕ್ಷೆ
ನಿಗಮದಲ್ಲಿ ಖಾಲಿ ಇರುವ 309 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ 1:5 ಅನುಪಾತದಲ್ಲಿ ಸಹನ ಶಕ್ತಿ ಪರೀಕ್ಷೆ ಮೇ 12ರಿಂದ 16ರವರೆಗೆ ನಡೆಯಲಿದೆ. ಪ್ರಥಮ ಹಂತದ ಸಹನ ಶಕ್ತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಕಂಬ ಹತ್ತುವುದು, ಓಟ ಓಡುವುದು ಒಳಗೊಂಡಂತೆ ಐದು ಬಗೆಯ ಪರೀಕ್ಷೆ ನಡೆಸಲಾಗುವುದು. ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು, ಐದು ಪರೀಕ್ಷೆಗಳಲ್ಲಿ ಮೂರರಲ್ಲಿ ಅರ್ಹತೆಗಳಿಸಿಬೇಕಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂಕಗಳ ಮೆರಿಟ್ ಆಧಾರದಲ್ಲಿ 1:1 ಅನುಪಾತದ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ..

ಈ ಸಂದರ್ಭದಲ್ಲಿ ಮುಖ್ಯ ಇಂಜಿನಿಯರ್‌ ಡಿ.ಜೆ. ದಿವಾಕರ್‌, ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಮುಖ್ಯ ಆರ್ಥಿಕ ಅಧಿಕಾರಿ ರೇಣುಕಾ, ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಡಾ. ಬಿ.ಆರ್.‌ ರೂಪ, ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್‌ ಸೇರಿದಂತೆ ಇನ್ನಿತರರು ಇದ್ದರು.

ದಾಖಲಾತಿ ತರುವುದು ಕಡ್ಡಾಯ:
ಸಹನ ಶಕ್ತಿ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಎಲ್ಲ ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್‌ ಜೆರಾಕ್ಸ್‌ ಪ್ರತಿಯನ್ನು ಕಡ್ಡಾಯವಾಗಿ ತರಬೇಕಿದೆ.

“ಸಹನ ಶಕ್ತಿ ಪರೀಕ್ಷೆ ಮೂಲಕ ನಿಗಮಕ್ಕೆ ಆಯ್ಕೆಯಾಗುವ ಸಿಬ್ಬಂದಿ ಉತ್ತಮ ರೀತಿಯಲ್ಲಿ ಹಾಗೂ ತಮ್ಮ ಸುರಕ್ಷತೆಗೂ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು. ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮೆರಿಟ್‌ ಹಾಗೂ ಎಂಡುರೆನ್ಸ್‌ ಟೆಸ್ಟ್‌ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳಿಗೆ ಅನುಸಾರವಾಗಿ ನಡೆಸಲಾಗುತ್ತಿದೆ”. – ಕೆ.ಎಂ.ಮುನಿಗೋಪಾಲ್‌ ರಾಜು, ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್‌.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago