ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್ ರೆಸ್ಟೋರೆಂಟ್(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.
ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.
ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.
ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್ಸೈಟ್ನ ಈ.ಆರ್.ಇ.ಪಿ.ಎಸ್ (IREPS) ಪೋರ್ಟಲ್ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…