ಮೈಸೂರು ನಗರ

ರೈಲು ಕೋಚ್‌ ರೆಸ್ಟೋರೆಂಟ್‌ ಸ್ಥಾಪನೆ: ಗುತ್ತಿಗೆ ನೀಡಲು ಇ-ಹರಾಜು

ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್‌ ರೆಸ್ಟೋರೆಂಟ್‌(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.

ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.

ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್‌ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.

ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್‌ಸೈಟ್‌ನ ಈ.ಆರ್‌.ಇ.ಪಿ.ಎಸ್‌ (IREPS) ಪೋರ್ಟಲ್‌ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್‌ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

4 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

16 mins ago

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌…

31 mins ago

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…

45 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: 52,000 ಭಾರತೀಯರು ತಾಯ್ನಾಡಿಗೆ ವಾಪಸ್‌

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ್‌ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್‌ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ…

1 hour ago

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ: ಎನ್. ಚಲುವರಾಯಸ್ವಾಮಿ

ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…

1 hour ago