ಮೈಸೂರು ನಗರ

ರೈಲು ಕೋಚ್‌ ರೆಸ್ಟೋರೆಂಟ್‌ ಸ್ಥಾಪನೆ: ಗುತ್ತಿಗೆ ನೀಡಲು ಇ-ಹರಾಜು

ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್‌ ರೆಸ್ಟೋರೆಂಟ್‌(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.

ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.

ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್‌ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.

ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್‌ಸೈಟ್‌ನ ಈ.ಆರ್‌.ಇ.ಪಿ.ಎಸ್‌ (IREPS) ಪೋರ್ಟಲ್‌ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್‌ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago