ಮೈಸೂರು ನಗರ

ರೈಲು ಕೋಚ್‌ ರೆಸ್ಟೋರೆಂಟ್‌ ಸ್ಥಾಪನೆ: ಗುತ್ತಿಗೆ ನೀಡಲು ಇ-ಹರಾಜು

ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್‌ ರೆಸ್ಟೋರೆಂಟ್‌(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.

ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.

ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್‌ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.

ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್‌ಸೈಟ್‌ನ ಈ.ಆರ್‌.ಇ.ಪಿ.ಎಸ್‌ (IREPS) ಪೋರ್ಟಲ್‌ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್‌ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

4 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

6 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

7 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

8 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

10 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

11 hours ago