ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್ ರೆಸ್ಟೋರೆಂಟ್(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.
ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.
ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.
ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್ಸೈಟ್ನ ಈ.ಆರ್.ಇ.ಪಿ.ಎಸ್ (IREPS) ಪೋರ್ಟಲ್ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…