ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್ ರೆಸ್ಟೋರೆಂಟ್(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.
ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.
ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.
ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್ಸೈಟ್ನ ಈ.ಆರ್.ಇ.ಪಿ.ಎಸ್ (IREPS) ಪೋರ್ಟಲ್ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…