ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್ ರೆಸ್ಟೋರೆಂಟ್(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.
ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.
ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.
ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್ಸೈಟ್ನ ಈ.ಆರ್.ಇ.ಪಿ.ಎಸ್ (IREPS) ಪೋರ್ಟಲ್ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…