ಮೈಸೂರು ನಗರ

ರೈಲು ಕೋಚ್‌ ರೆಸ್ಟೋರೆಂಟ್‌ ಸ್ಥಾಪನೆ: ಗುತ್ತಿಗೆ ನೀಡಲು ಇ-ಹರಾಜು

ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್‌ ರೆಸ್ಟೋರೆಂಟ್‌(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ.

ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ ಸ್ಥಳಗಳು, ಪ್ರಯಾಣಿಕರು ಮತ್ತು ಸಂದರ್ಶಕರಿಗೆ ಆಧುನಿಕ ಸೌಕರ್ಯಗಳನ್ನು ನೀಡುವ ಮೂಲಕ ಆಹಾರದ ಸವಿಯ ಅನುಭವವನ್ನು ಒದಗಿಸುತ್ತವೆ.

ನಿಲ್ದಾಣದ ಆವರಣಗಳಲ್ಲಿ ನೆಲೆಗೊಂಡು ಕಾರ್ಯ ನಿರ್ವಹಿಸುವ ಈ ರೆಸ್ಟೋರೆಂಟ್‌ಗಳು ಪ್ರಯಾಣಿಕರ ಆಗತ್ಯಗಳನ್ನು ಪೂರೈಸುವ ಜೊತೆಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ಉಪಹಾರಗಳನ್ನು ನೀಡಿ ಒಟ್ಟಾರೆ ಪ್ರಯಾಣಿಕರಿಗೆ ಪ್ರಯಾಣದ ಆಹ್ಲಾದಕರ ಅನುಭವವನ್ನು ಹೆಚ್ಚಿಸುತ್ತವೆ.

ಈ ಸ್ಥಳಗಳನ್ನು ಗುತ್ತಿಗೆ ನೀಡಲು ಮೈಸೂರು ವಿಭಾಗವು ಈ-ಹರಾಜನ್ನು ನಡೆಸುತ್ತಿದೆ. ಇ-ಹರಾಜನ್ನು ಜನವರಿ.20ರಂದು ಮಧ್ಯಾಹ್ನ 12:00 ಗಂಟೆಗೆ ವೆಬ್‌ಸೈಟ್‌ನ ಈ.ಆರ್‌.ಇ.ಪಿ.ಎಸ್‌ (IREPS) ಪೋರ್ಟಲ್‌ ಮೂಲಕ ನಿಗದಿಪಡಿಸಲಾಗಿದೆ. ಈ ಪೋರ್ಟಲ್‌ನಲ್ಲಿ ನೊಂದಾಯಿಸಿರುವ ಅರ್ಹ ಗುತ್ತಿಗೆದಾರರನ್ನು ಬಿಡ್ಡಿಂಗ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

42 mins ago

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

5 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

6 hours ago

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

21 hours ago