ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು.
ಮಾನಸಗಂಗೋತ್ರಿಯಲ್ಲಿರುವ ಭಾರತೀಯ ಭಾಷಾ ಸಂಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಲ್ಲಿ ನೂರಾರು ಭಾಷೆಗಳ ವೈವಿಧ್ಯತೆ ಇದ್ದರೂ ಧರ್ಮ ಹಾಗೂ ಸಂಸ್ಕೃತಿ ವಿಚಾರದಲ್ಲಿ ನಾವು ಏಕತೆಯನ್ನು ಹೊಂದಿದ್ದೇವೆ. ಇದು ಭಾರತೀಯ ಭಾಷಾ ಸೌಂದರ್ಯವನ್ನು ತೋರ್ಪಡಿಸುತ್ತದೆ ಎಂದರು.
ಇದನ್ನು ಓದಿ : ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು
ಪ್ರಪಂಚದ ಬೇರೆ-ಬೇರೆ ದೇಶಗಳನ್ನು ನೋಡಿದರೆ ಅಲ್ಪ ಬದಲಾವಣೆ ಹೊರತಾಗಿ ಅಲ್ಲಿ ಒಂದೇ ರೀತಿಯ ಭಾಷೆ, ಆಚಾರ-ವಿಚಾರಗಳು ಇರುತ್ತವೆ. ನೂರಾರು ಕಿಲೋ ಮೀಟರ್ ಸುತ್ತಿದರೂ ಒಂದೇ ಭಾಷೆ ಮಾತ ನಾಡುವವರು ಸಿಗುತ್ತಾರೆ. ಆದರೆ, ಭಾರತದಲ್ಲಿ ಅಂತಹ ವಾತಾವರಣ ಕಾಣುವುದಿಲ್ಲ. ಇಲ್ಲಿ ಕನ್ಯಾಕುಮಾರಿ ಯಲ್ಲಿ ರೈಲನ್ನು ಹತ್ತಿ ಕಾಶ್ಮೀರದ ಕಡೆಗೆ ಪ್ರಯಾಣ ಶುರು ಮಾಡಿದರೆ, ನಿಲ್ದಾಣಕ್ಕೊಂದು ಭಾಷೆ ಬದಲಾವಣೆ ಯಾಗುತ್ತದೆ. ಆಹಾರ ಪದ್ಧತಿಯೂ ಅದೇ ರೀತಿ ಬದಲಾವಣೆಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿಐಐಎಲ್ನ ಉಪ ನಿರ್ದೇಶಕ ಪ್ರೊ.ಪಿ.ಆರ್.ಧರ್ಮೇಶ್ ಫರ್ನಾಂಡೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ ಅವರು ‘ಭಾಷೆ, ರಾಷ್ಟ್ರೀಯತೆ ಮತ್ತು ಸಂಸ್ಕೃತಿ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಿಐಐಎಲ್ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಡಾ.ಎಲ್.ಆರ್.ಪ್ರೇಮಕುಮಾರ್ ಉಪಸ್ಥಿತರಿದ್ದರು.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…