ಮೈಸೂರು ನಗರ

ಭಾಷೆ ಬೇರೆಯಾದರೂ, ದೇಶವೊಂದೇ ಭಾರತ

ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು.

ಮಾನಸಗಂಗೋತ್ರಿಯಲ್ಲಿರುವ ಭಾರತೀಯ ಭಾಷಾ ಸಂಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಲ್ಲಿ ನೂರಾರು ಭಾಷೆಗಳ ವೈವಿಧ್ಯತೆ ಇದ್ದರೂ ಧರ್ಮ ಹಾಗೂ ಸಂಸ್ಕೃತಿ ವಿಚಾರದಲ್ಲಿ ನಾವು ಏಕತೆಯನ್ನು ಹೊಂದಿದ್ದೇವೆ. ಇದು ಭಾರತೀಯ ಭಾಷಾ ಸೌಂದರ್ಯವನ್ನು ತೋರ್ಪಡಿಸುತ್ತದೆ ಎಂದರು.

ಇದನ್ನು ಓದಿ :  ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್‌ ಫೋಗಟ್‌ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು

ಪ್ರಪಂಚದ ಬೇರೆ-ಬೇರೆ ದೇಶಗಳನ್ನು ನೋಡಿದರೆ ಅಲ್ಪ ಬದಲಾವಣೆ ಹೊರತಾಗಿ ಅಲ್ಲಿ ಒಂದೇ ರೀತಿಯ ಭಾಷೆ, ಆಚಾರ-ವಿಚಾರಗಳು ಇರುತ್ತವೆ. ನೂರಾರು ಕಿಲೋ ಮೀಟರ್ ಸುತ್ತಿದರೂ ಒಂದೇ ಭಾಷೆ ಮಾತ ನಾಡುವವರು ಸಿಗುತ್ತಾರೆ. ಆದರೆ, ಭಾರತದಲ್ಲಿ ಅಂತಹ ವಾತಾವರಣ ಕಾಣುವುದಿಲ್ಲ. ಇಲ್ಲಿ ಕನ್ಯಾಕುಮಾರಿ ಯಲ್ಲಿ ರೈಲನ್ನು ಹತ್ತಿ ಕಾಶ್ಮೀರದ ಕಡೆಗೆ ಪ್ರಯಾಣ ಶುರು ಮಾಡಿದರೆ, ನಿಲ್ದಾಣಕ್ಕೊಂದು ಭಾಷೆ ಬದಲಾವಣೆ ಯಾಗುತ್ತದೆ. ಆಹಾರ ಪದ್ಧತಿಯೂ ಅದೇ ರೀತಿ ಬದಲಾವಣೆಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಐಐಎಲ್‌ನ ಉಪ ನಿರ್ದೇಶಕ ಪ್ರೊ.ಪಿ.ಆರ್.ಧರ್ಮೇಶ್ ಫರ್ನಾಂಡೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ ಅವರು ‘ಭಾಷೆ, ರಾಷ್ಟ್ರೀಯತೆ ಮತ್ತು ಸಂಸ್ಕೃತಿ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಿಐಐಎಲ್ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಡಾ.ಎಲ್.ಆರ್.ಪ್ರೇಮಕುಮಾರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

1 hour ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

2 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago