ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು.
ಮಾನಸಗಂಗೋತ್ರಿಯಲ್ಲಿರುವ ಭಾರತೀಯ ಭಾಷಾ ಸಂಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಲ್ಲಿ ನೂರಾರು ಭಾಷೆಗಳ ವೈವಿಧ್ಯತೆ ಇದ್ದರೂ ಧರ್ಮ ಹಾಗೂ ಸಂಸ್ಕೃತಿ ವಿಚಾರದಲ್ಲಿ ನಾವು ಏಕತೆಯನ್ನು ಹೊಂದಿದ್ದೇವೆ. ಇದು ಭಾರತೀಯ ಭಾಷಾ ಸೌಂದರ್ಯವನ್ನು ತೋರ್ಪಡಿಸುತ್ತದೆ ಎಂದರು.
ಇದನ್ನು ಓದಿ : ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು
ಪ್ರಪಂಚದ ಬೇರೆ-ಬೇರೆ ದೇಶಗಳನ್ನು ನೋಡಿದರೆ ಅಲ್ಪ ಬದಲಾವಣೆ ಹೊರತಾಗಿ ಅಲ್ಲಿ ಒಂದೇ ರೀತಿಯ ಭಾಷೆ, ಆಚಾರ-ವಿಚಾರಗಳು ಇರುತ್ತವೆ. ನೂರಾರು ಕಿಲೋ ಮೀಟರ್ ಸುತ್ತಿದರೂ ಒಂದೇ ಭಾಷೆ ಮಾತ ನಾಡುವವರು ಸಿಗುತ್ತಾರೆ. ಆದರೆ, ಭಾರತದಲ್ಲಿ ಅಂತಹ ವಾತಾವರಣ ಕಾಣುವುದಿಲ್ಲ. ಇಲ್ಲಿ ಕನ್ಯಾಕುಮಾರಿ ಯಲ್ಲಿ ರೈಲನ್ನು ಹತ್ತಿ ಕಾಶ್ಮೀರದ ಕಡೆಗೆ ಪ್ರಯಾಣ ಶುರು ಮಾಡಿದರೆ, ನಿಲ್ದಾಣಕ್ಕೊಂದು ಭಾಷೆ ಬದಲಾವಣೆ ಯಾಗುತ್ತದೆ. ಆಹಾರ ಪದ್ಧತಿಯೂ ಅದೇ ರೀತಿ ಬದಲಾವಣೆಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿಐಐಎಲ್ನ ಉಪ ನಿರ್ದೇಶಕ ಪ್ರೊ.ಪಿ.ಆರ್.ಧರ್ಮೇಶ್ ಫರ್ನಾಂಡೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ ಅವರು ‘ಭಾಷೆ, ರಾಷ್ಟ್ರೀಯತೆ ಮತ್ತು ಸಂಸ್ಕೃತಿ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಿಐಐಎಲ್ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಡಾ.ಎಲ್.ಆರ್.ಪ್ರೇಮಕುಮಾರ್ ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…