ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಪ್ರೊ.ಆರ್.ವಿ.ಎಸ್. ಸುಂದರಂ ಹೇಳಿದರು.
ಮಾನಸಗಂಗೋತ್ರಿಯಲ್ಲಿರುವ ಭಾರತೀಯ ಭಾಷಾ ಸಂಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಲ್ಲಿ ನೂರಾರು ಭಾಷೆಗಳ ವೈವಿಧ್ಯತೆ ಇದ್ದರೂ ಧರ್ಮ ಹಾಗೂ ಸಂಸ್ಕೃತಿ ವಿಚಾರದಲ್ಲಿ ನಾವು ಏಕತೆಯನ್ನು ಹೊಂದಿದ್ದೇವೆ. ಇದು ಭಾರತೀಯ ಭಾಷಾ ಸೌಂದರ್ಯವನ್ನು ತೋರ್ಪಡಿಸುತ್ತದೆ ಎಂದರು.
ಇದನ್ನು ಓದಿ : ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು
ಪ್ರಪಂಚದ ಬೇರೆ-ಬೇರೆ ದೇಶಗಳನ್ನು ನೋಡಿದರೆ ಅಲ್ಪ ಬದಲಾವಣೆ ಹೊರತಾಗಿ ಅಲ್ಲಿ ಒಂದೇ ರೀತಿಯ ಭಾಷೆ, ಆಚಾರ-ವಿಚಾರಗಳು ಇರುತ್ತವೆ. ನೂರಾರು ಕಿಲೋ ಮೀಟರ್ ಸುತ್ತಿದರೂ ಒಂದೇ ಭಾಷೆ ಮಾತ ನಾಡುವವರು ಸಿಗುತ್ತಾರೆ. ಆದರೆ, ಭಾರತದಲ್ಲಿ ಅಂತಹ ವಾತಾವರಣ ಕಾಣುವುದಿಲ್ಲ. ಇಲ್ಲಿ ಕನ್ಯಾಕುಮಾರಿ ಯಲ್ಲಿ ರೈಲನ್ನು ಹತ್ತಿ ಕಾಶ್ಮೀರದ ಕಡೆಗೆ ಪ್ರಯಾಣ ಶುರು ಮಾಡಿದರೆ, ನಿಲ್ದಾಣಕ್ಕೊಂದು ಭಾಷೆ ಬದಲಾವಣೆ ಯಾಗುತ್ತದೆ. ಆಹಾರ ಪದ್ಧತಿಯೂ ಅದೇ ರೀತಿ ಬದಲಾವಣೆಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿಐಐಎಲ್ನ ಉಪ ನಿರ್ದೇಶಕ ಪ್ರೊ.ಪಿ.ಆರ್.ಧರ್ಮೇಶ್ ಫರ್ನಾಂಡೀಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ ಅವರು ‘ಭಾಷೆ, ರಾಷ್ಟ್ರೀಯತೆ ಮತ್ತು ಸಂಸ್ಕೃತಿ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಿಐಐಎಲ್ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಡಾ.ಎಲ್.ಆರ್.ಪ್ರೇಮಕುಮಾರ್ ಉಪಸ್ಥಿತರಿದ್ದರು.
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…