ಮೈಸೂರು ನಗರ

ಸಾಧಕರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು ಜಯಂತಿಗಳ ಆಚರಣೆ: ಎಡಿಸಿ ಡಾ.ಪಿ ಶಿವರಾಜು

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ

ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು

ಇಂದು (ಏ.16) ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ ಹಾಗೂ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇ 02 ರಂದು ಶಂಕರಾಚಾರ್ಯ ಜಯಂತಿಯನ್ನು ಕಲಾಮಂದಿರದಲ್ಲಿ ಇರುವ ಕಿರು ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ಆಚರಣೆ ಮಾಡಲಾಗುವುದು. ಮೇ 04 ರಂದು ಭಗೀರಥ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಮಾಡಲಾಗುವುದು.

ಬೆಳಗ್ಗೆ 10.30 ಗಂಟೆಯಿಂದ ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಅಂದು ಬೆಳಗ್ಗೆ 9.30 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಮೆರವಣಿಗೆ ಪ್ರಾರಂಭ ಮಾಡಲಾಗುವುದು. ಮೇ 10 ರಂದು ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಆಚರಣೆ, ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.

ಮೆರವಣಿಗೆ ಪ್ರಾರಂಭವಾಗುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಮಿಯಾನ ಸ್ವಚ್ಚತೆ ಹಾಗೂ ಚೇರ್ ಗಳ ವ್ಯವಸ್ಥೆ ಹಾಗೂ
ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು.
ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago