ಮೈಸೂರು ನಗರ

ಸಾಧಕರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು ಜಯಂತಿಗಳ ಆಚರಣೆ: ಎಡಿಸಿ ಡಾ.ಪಿ ಶಿವರಾಜು

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ

ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು

ಇಂದು (ಏ.16) ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ ಹಾಗೂ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇ 02 ರಂದು ಶಂಕರಾಚಾರ್ಯ ಜಯಂತಿಯನ್ನು ಕಲಾಮಂದಿರದಲ್ಲಿ ಇರುವ ಕಿರು ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ಆಚರಣೆ ಮಾಡಲಾಗುವುದು. ಮೇ 04 ರಂದು ಭಗೀರಥ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಮಾಡಲಾಗುವುದು.

ಬೆಳಗ್ಗೆ 10.30 ಗಂಟೆಯಿಂದ ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಅಂದು ಬೆಳಗ್ಗೆ 9.30 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಮೆರವಣಿಗೆ ಪ್ರಾರಂಭ ಮಾಡಲಾಗುವುದು. ಮೇ 10 ರಂದು ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಆಚರಣೆ, ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.

ಮೆರವಣಿಗೆ ಪ್ರಾರಂಭವಾಗುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಮಿಯಾನ ಸ್ವಚ್ಚತೆ ಹಾಗೂ ಚೇರ್ ಗಳ ವ್ಯವಸ್ಥೆ ಹಾಗೂ
ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು.
ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

20 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago