ಮೈಸೂರು ನಗರ

ಕದನ ವಿರಾಮದ ಮೂಲಕ ನಮ್ಮ ಸೈನಿಕರ ಕೈಕಟ್ಟಿ ಹಾಕಿದಂತಾಗಿದೆ: ಮಾಜಿ ಸೈನಿಕರ ಬೇಸರ

ಮೈಸೂರು: ಭಾರತ-ಪಾಕ್‌ ನಡುವೆ ಕದನ ವಿರಾಮ ಘೋಷಣೆಯಾಗಿರುವುದರಿಂದ ನಮ್ಮ ಸೈನಿಕರ ಕೈಕಟ್ಟಿ ಹಾಕಿದಂತಾಗಿದೆ ಎಂದು ಮಾಜಿ ಸೈನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ಪಾಕ್ ನಡುವೆ ಎದ್ದಿದ್ದ ಅಘೋಷಿತ ಯುದ್ಧ ಅರ್ಧದಲ್ಲೇ ನಿಂತಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ದಿವಾಕರ್‌ ಮಾತನಾಡಿ, ಇದೊಂದು ಒಳ್ಳೆಯ ಅವಕಾಶ ಇತ್ತು. ಈ ಅವಕಾಶವನ್ನು ಬಳಸಿಕೊಂಡು ಪಾಪಿ ಪಾಕಿಸ್ತಾನವನ್ನು ಸದೆಬಡಿಯಬಹುದಿತ್ತು. ಪಾಕಿಸ್ತಾನವನ್ನು ಸದೆಬಡಿಯಲು ನಮ್ಮ ಸೇನೆ ಬಹಳ ಕಾತುರದಿಂದ ಕಾಯುತ್ತಿತ್ತು. ಯುದ್ಧ ಅಧಿಕೃತವಾಗಿ ಆರಂಭವಾಗುವುದಕ್ಕೂ ಮುನ್ನ ಕದನ ವಿರಾಮಗೊಳಿಸಿದ್ದು ನಮಗಂತೂ ಭಾರೀ ಬೇಸರ ತರಿಸಿದೆ. ನಮ್ಮ ದೇಶದಲ್ಲಿರುವ ಸುಮಾರು 14 ಲಕ್ಷಕ್ಕೂ ಹೆಚ್ಚು ಜನ ಸೈನಿಕರು ಪಾಕಿಸ್ತಾನ ಹಾಗೂ ಉಗ್ರರನ್ನು ಸದೆಬಡಿಯಲು ಸನ್ನದ್ಧರಾಗಿದ್ದರು ಎಂದರು.

ಇನ್ನು ನಮಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮಧ್ಯಸ್ಥಿಕೆ ಬೇಕಿರಲಿಲ್ಲ. ಇದರಿಂದ ನಮ್ಮ ಸೈನಿಕರಿಗೆ ನಿರಾಸೆಯಾಗಿದೆ. ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆಗೆ ಒಪ್ಪಬಾರದಿತ್ತು. ಇದೇ ಒಂದು ಸದಾವಕಾಶ ಎಂದು ತಿಳಿದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬಹುದಿತ್ತು. ಅಮೇರಿಕಾ ಮಧ್ಯಸ್ಥಿಕೆ ವಹಿಸಿ ಈಗ ನಾನೇ ಸೂಪರ್ ಪವರ್ ಕಂಟ್ರಿ ಎಂದು ಹೇಳಿಕೊಳ್ಳುತ್ತಿದೆ. ಈ ಮೂಲಕ ಡೊನಾಲ್ಡ್‌ ಟ್ರಂಪ್‌ ನಮ್ಮ ಭಾರತೀಯ ಸೇನೆಗೆ ಅಪಮಾನ ಮಾಡಿದ್ದಾರೆ. ಯುದ್ಧದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದಿತ್ತು. ಈ ಬಗ್ಗೆ ರಾಷ್ಟ್ರಪತಿಗಳು ಒಂದು ನಿರ್ಧಾರ ಮಾಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

22 mins ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

30 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

44 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

1 hour ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

2 hours ago