ceasefire
ಮೈಸೂರು: ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗಿರುವುದರಿಂದ ನಮ್ಮ ಸೈನಿಕರ ಕೈಕಟ್ಟಿ ಹಾಕಿದಂತಾಗಿದೆ ಎಂದು ಮಾಜಿ ಸೈನಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ಪಾಕ್ ನಡುವೆ ಎದ್ದಿದ್ದ ಅಘೋಷಿತ ಯುದ್ಧ ಅರ್ಧದಲ್ಲೇ ನಿಂತಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ದಿವಾಕರ್ ಮಾತನಾಡಿ, ಇದೊಂದು ಒಳ್ಳೆಯ ಅವಕಾಶ ಇತ್ತು. ಈ ಅವಕಾಶವನ್ನು ಬಳಸಿಕೊಂಡು ಪಾಪಿ ಪಾಕಿಸ್ತಾನವನ್ನು ಸದೆಬಡಿಯಬಹುದಿತ್ತು. ಪಾಕಿಸ್ತಾನವನ್ನು ಸದೆಬಡಿಯಲು ನಮ್ಮ ಸೇನೆ ಬಹಳ ಕಾತುರದಿಂದ ಕಾಯುತ್ತಿತ್ತು. ಯುದ್ಧ ಅಧಿಕೃತವಾಗಿ ಆರಂಭವಾಗುವುದಕ್ಕೂ ಮುನ್ನ ಕದನ ವಿರಾಮಗೊಳಿಸಿದ್ದು ನಮಗಂತೂ ಭಾರೀ ಬೇಸರ ತರಿಸಿದೆ. ನಮ್ಮ ದೇಶದಲ್ಲಿರುವ ಸುಮಾರು 14 ಲಕ್ಷಕ್ಕೂ ಹೆಚ್ಚು ಜನ ಸೈನಿಕರು ಪಾಕಿಸ್ತಾನ ಹಾಗೂ ಉಗ್ರರನ್ನು ಸದೆಬಡಿಯಲು ಸನ್ನದ್ಧರಾಗಿದ್ದರು ಎಂದರು.
ಇನ್ನು ನಮಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ಬೇಕಿರಲಿಲ್ಲ. ಇದರಿಂದ ನಮ್ಮ ಸೈನಿಕರಿಗೆ ನಿರಾಸೆಯಾಗಿದೆ. ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆಗೆ ಒಪ್ಪಬಾರದಿತ್ತು. ಇದೇ ಒಂದು ಸದಾವಕಾಶ ಎಂದು ತಿಳಿದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬಹುದಿತ್ತು. ಅಮೇರಿಕಾ ಮಧ್ಯಸ್ಥಿಕೆ ವಹಿಸಿ ಈಗ ನಾನೇ ಸೂಪರ್ ಪವರ್ ಕಂಟ್ರಿ ಎಂದು ಹೇಳಿಕೊಳ್ಳುತ್ತಿದೆ. ಈ ಮೂಲಕ ಡೊನಾಲ್ಡ್ ಟ್ರಂಪ್ ನಮ್ಮ ಭಾರತೀಯ ಸೇನೆಗೆ ಅಪಮಾನ ಮಾಡಿದ್ದಾರೆ. ಯುದ್ಧದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದಿತ್ತು. ಈ ಬಗ್ಗೆ ರಾಷ್ಟ್ರಪತಿಗಳು ಒಂದು ನಿರ್ಧಾರ ಮಾಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…