ಮೈಸೂರು ನಗರ

ಸೌಜನ್ಯ ಪ್ರಕರಣ ಹೊರತುಪಡಿಸಿ ಉಳಿದೆಲ್ಲಾ ಆರೋಪ ಷಡ್ಯಂತ್ರವೇ: ಶಾಸಕ ಹರೀಶ್ ಗೌಡ ಆರೋಪ

ಮೈಸೂರು: ಸೌಜನ್ಯ ಪ್ರಕರಣ ಹೊರತುಪಡಿಸಿ ಉಳಿದೆಲ್ಲಾ ಆರೋಪ ಷಡ್ಯಂತ್ರವೇ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಆರೋಪಿಸಿದ್ದಾರೆ.

ಧರ್ಮಸ್ಥಳ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೌಜನ್ಯ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಸೌಜನ್ಯಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಒತ್ತಾಯ. ಧರ್ಮಸ್ಥಳ ರಾಜ್ಯದ ಹಿಂದೂ ಶ್ರದ್ದಾ ಕೇಂದ್ರ. ನಮ್ಮ ಸರ್ಕಾರದ ದಿಟ್ಟ ನಿಲುವಿನಿಂದ ಎಸ್‌ಐಟಿ ರಚನೆ ಮಾಡಿತ್ತು. ಬಿಜೆಪಿ ಎಸ್‌ಐಟಿ ರಚನೆಯನ್ನೇ ವಿರೋದಿಸಿತ್ತು. ಇಂದು ಅದೆ ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳ ಕಳಂಕ ಮುಕ್ತವಾಗಿದೆ. ಎಸ್‌ಐಟಿ ತನಿಖೆ ನಡೆಸದಿದ್ರೆ ಧರ್ಮಸ್ಥಳದ ಕಳಂಕ‌ ತೊಲಗುತ್ತಿರಲಿಲ್ಲ ಎಂದರು.

ಇನ್ನು ಲೇಖಕಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆಗೆ ಪ್ರತಾಪ್ ಸಿಂಹ ಆಕ್ಷೇಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರತಾಪ್ ಸಿಂಹನಿಗೆ ತಲೆ ಇದಿಯಾ.? ಈ ಹಿಂದೆ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದಾಗ ಯಾಕೆ ವಿರೋಧ ಮಾಡಿಲ್ಲ. ಬಾನು ಮುಷ್ತಾಕ್ ಭಾರತ ದೇಶದವರಲ್ಲವಾ.? ಬೂಕರ್ ಪ್ರಶಸ್ತಿ ಪಡೆದ ಸಾಹಿತಿಗೆ ನಮ್ಮ ಸರ್ಕಾರ ಗೌರವಿಸುತ್ತಿದೆ. ಬಿಜೆಪಿ ಜಾತಿ-ಧರ್ಮಗಳ ನಡುವೆ ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ನಾವೊಬ್ಬರೆ ಹಿಂದೂಗಳು ಎಂಬಂತೆ ವರ್ತಿಸುತ್ತಾರೆ. ನಮಗೆ ಹಿಂದೂ ಧರ್ಮವನ್ನು ಹಡವಿಟ್ಟಿದ್ದಾರೆ ಎಂಬಂತೆ ನಡೆದುಕೊಳ್ಳುತ್ತಾರೆ. ಇಂತಹವರೆಲ್ಲ ಇರೋದು ಈ ರಾಜ್ಯದ ದುರ್ವಿಧಿ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

7 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

11 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

13 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

14 hours ago