ಮೈಸೂರು ನಗರ

ಮೈಸೂರಿನ ಕೇನ್ಸ್‌ ಟೆಕ್ನಾಲಜಿ ವಿಸ್ತರಣೆ : ಎಂ.ಬಿ ಪಾಟೀಲ್‌ ಭರವಸೆ

ಮೈಸೂರು : ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜೀಸ್ ಮತ್ತು ಸೈಯಂಟ್ ಡಿ.ಎಲ್.ಎಂ ಕಂಪನಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಹೂಡಿಕೆ ವಿಸ್ತರಣೆ ಮಾಡುವಂತೆ ಕೋರಿದರಲ್ಲದೆ, ಇದಕ್ಕೆ ಬೇಕಾದ ಭೂಮಿ ಮತ್ತಿತರ ಸೌಲಭ್ಯಗಳನ್ನು ಕ್ಷಿಪ್ರಗತಿಯಲ್ಲಿ ಒದಗಿಸುವ ಭರವಸೆ ನೀಡಿದರು.

‘ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಹೆಸರಾಗಿರುವ ಕೇನ್ಸ್ ಟೆಕ್ನಾಲಜೀಸ್ ಕಂಪನಿಯು ಚಾಮರಾಜನಗರದಲ್ಲಿ ತನ್ನ ಘಟಕವನ್ನು ವಿಸ್ತರಿಸಲು ೨೦ ಎಕರೆ ಭೂಮಿ ಕೇಳಿದೆ. ಈಗ ಅಲ್ಲಿ ಕಂಪನಿಗೆ ಹೊಂದಿಕೊಂಡಿರುವ ಭೂಮಿಯು ಕೃಷಿಯೇತರ ಉದ್ದೇಶಕ್ಕೆ ಮೀಸಲಾಗಿದೆ. ಇದನ್ನು ಬಗೆಹರಿಸಿ ಕಂಪನಿಗೆ ಭೂಮಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಏಳು ರಾಜ್ಯಗಳಲ್ಲಿ ಅಸ್ತಿತ್ವ ಹೊಂದಿರುವ ಕಂಪನಿಯು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಬೇಕು. ಚಾಮರಾಜನಗರದಲ್ಲಿ ಕಂಪನಿಯು ಮುಂದಿನ ವರ್ಷದ ವೇಳೆಗೆ ಒಟ್ಟು ೧,೫೦೦ ಕೋಟಿ ರೂ. ಹೂಡಿಕೆಯಾದಂತಾಗಲಿದೆ. ಜತೆಗೆ ೩ ಸಾವಿರ ಜನ ಉಳಿದುಕೊಳ್ಳುವಂಥ ಹಾಸ್ವೆಲ್ ನಿರ್ಮಿಸಲಿದೆ’ ಎಂದು ಹೇಳಿದರು.

ಕೇನ್ಸ್ ಕಂಪನಿಯು ೧೯೮೮ರಲ್ಲಿ ಸ್ಥಾಪನೆಯಾದ ದಿನದಿಂದಲೂ ಮೈಸೂರನ್ನು ಕೇಂದ್ರ ಕಚೇರಿಯಾಗಿ ಹೊಂದಿದೆ. ೭೦ ಜನರಿಂದ ಆರಂಭವಾದ ಚಾಮರಾಜನಗರ ಘಟಕದಲ್ಲಿ ಈಗ ೭೦೦ ಉದ್ಯೋಗಿಗಳಾಗಿದ್ದಾರೆ. ಕಂಪನಿಯು ತನ್ನ ಉತ್ಪನ್ನಗಳನ್ನು ರೈಲ್ವೇಸ್, ಐಒಟಿ, ಐಟಿ, ವೈದ್ಯಕೀಯ, ಆಟೋಮೋಟೀವ್, ಏರೋಸ್ಪೇಸ್ ಮತ್ತು ರಕ್ಷಣಾ ವಲಯಗಳಿಗೆ ಸಮರ್ಥವಾಗಿ ಪೂರೈಸುತ್ತಿದೆ. ಕಂಪನಿಯು ಒಟ್ಟಾರೆಯಾಗಿ ೧,೫೦೦ ಉದ್ಯೋಗಿಗಳನ್ನು ಹೊಂದಿದ್ದು, ೩ ಖಂಡಗಳ ೨೬ ದೇಶಗಳಲ್ಲಿ ೨೫೦ಕ್ಕೂ ಹೆಚ್ಚು ಗ್ರಾಹಕ ಸಂಸ್ಥೆಗಳ ಜಾಲವನ್ನು ಹೊಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ:-ಎಸ್‌ಐಆರ್‌ ಜಾರಿಯಿಂದ ಪ್ರಜಾಪ್ರಭುತ್ವ ದುರ್ಬಲ: ಸಂಸದೆ ಪ್ರಿಯಾಂಕಾ ಗಾಂಧಿ

ಮುಳುವಾಡದಲ್ಲೂ ಸ್ಥಾಪಿಸಲು ಮನವಿ:
ಪಿಸಿಬಿ ತಯಾರಿಸುವ ಕೇನ್ಸ್ ಕಂಪನಿಯು ವಿಜಯಪುರದ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೂಡ ಒಂದು ಪಿಸಿಬಿ ಉತ್ಪಾದನಾ ಘಟಕ ಸ್ಥಾಪಿಸಬೇಕು; ಅಲ್ಲಿ ವಿದ್ಯುತ್ ಮತ್ತು ನೀರಿಗೆ ಯಾವ ಕೊರತೆಯೂ ಇಲ್ಲ. ಇದರಿಂದ ಕೈಗಾರಿಕಾ ವಿಕೇಂದ್ರೀಕರಣವನ್ನು ಕೂಡ ಸಾಽಸಿದಂತಾಗುತ್ತದೆ ಎಂದು ಮನವಿ ಮಾಡಿಕೊಂಡರು. ಜತೆಗೆ ಕೆಜಿಎಫ್ ನಲ್ಲಿ ಕೂಡ ಕೈಗಾರಿಕೆಗೆ ಭೂಮಿ ಲಭ್ಯವಿದೆ. ಕೇನ್ಸ್ ಕಂಪನಿ ಅಲ್ಲೂ ಘಟಕ ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಸಚಿವರು ಪ್ರಸ್ತಾಪಿಸಿದರುಕೇನ್ಸ್ ಟೆಕ್ನಾಲಜೀಸ್ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ರಮೇಶ್ ಆರ್ ಕಣ್ಣನ್, ಅಧ್ಯಕ್ಷೆ ಸವಿತಾ ರಮೇಶ್, ನಿರ್ದೇಶಕ ಜಯರಾಂ,ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಆಯುಕ್ತ ರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎಂ.ಮಹೇಶ್ ಹಾಜರಿದ್ದರು.

ಸೈಯಂಟ್ ಕಂಪನಿಗೂ ಭೇಟಿ: ಇದೇ ಸಂದರ್ಭದಲ್ಲಿ ಸಚಿವರು ಮತ್ತೊಂದು ಎಲೆಕ್ಟ್ರಾನಿಕ್ ಉತ್ಪನ್ನಗಳ ಕಂಪನಿಯಾದ ಸೈಯಂಟ್‌ಗೂ ಭೇಟಿ ನೀಡಿ, ಅಲ್ಲಿಯ ಸೌಲಭ್ಯಗಳನ್ನು ವೀಕ್ಷಿಸಿದರು. ಕಂಪನಿಯ ಉನ್ನತಾಽಕಾರಿಗಳು ಕಂಪನಿಯು ಮಾಡುತ್ತಿರುವ ಉನ್ನತ ಮಟ್ಟದ ವಿನ್ಯಾಸ, ಡಿಜಿಟಲ್ ಟ್ವಿನ್ ಕ್ರಿಯೇಷನ್, ದೀರ್ಘಾವಽ ತಾಂತ್ರಿಕ ಸಹಭಾಗಿತ್ವ ಇತ್ಯಾದಿಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಕಂಪನಿಯ ಸಿಎಫ್‌ಒ ಆರ್. ಸುಬ್ರಹ್ಮಣ್ಯನ್ ಇದ್ದರು.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

12 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

13 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

14 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

15 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

15 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

16 hours ago