ಮೈಸೂರು ನಗರ

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಬೃಂದಾವನ ಬಡಾವಣೆಯ 2ನೇ ಹಂತ, 6ನೇ ಕ್ರಾಸ್‌ನಲ್ಲಿರುವ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಬಂಧಿತ ಶ್ರೀನಿವಾಸ್‌ನನ್ನು ದಿಢೀರ್ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳು, ಶಾಲೆ ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದರು. ಒಂದೇ ತಿಂಗಳಲ್ಲಿ ಹಲವು ಬಾರಿ ಇಂತಹ ಸಂದೇಶಗಳನ್ನು ರವಾನಿಸಿದ್ದ ಆರೋಪಿ ಈ ಕೃತ್ಯವನ್ನು ನಿಗೂಢವಾಗಿ ಮುಂದುವರಿಸುತ್ತಿದ್ದ ಎಂದು ತಿಳಿದುಬಂದಿದೆ.

ದೆಹಲಿ ಪೊಲೀಸ್ ತಂಡವು ಮೈಸೂರಿನ ವಿ.ವಿ ಪುರಂ ಪೊಲೀಸ್ ಠಾಣೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಆರೋಪಿಯ ಮನೆಯಿಂದ ಹಲವು ಸಿಮ್ ಕಾರ್ಡ್‌ಗಳು ಮತ್ತು ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಲಾಗಿತ್ತು. ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

1 hour ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

2 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

7 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

8 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

8 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

9 hours ago