ಮೈಸೂರು: ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ ಹಾಗೂ ಹಿರಿಯ ಪತ್ರಕರ್ತ ಈಚನೂರು ಕುಮಾರ್ ಅವರು ಇಂದು ನಿಧನರಾಗಿದ್ದಾರೆ.
ಈಚನೂರು ಕುಮಾರ್ ಅವರು, ಇಬ್ಬರು ಮಕ್ಕಳಾದ ಅಕ್ಷರಾ ಹಾಗೂ ಪತ್ರಕರ್ತ ಅಜಿತ್ರನ್ನು ಅಗಲಿದ್ದಾರೆ.
ಮೈಸೂರು ರಾಜ್ಯದ ಕಥೆಗಳು, ಅರಮನೆ, ರಾಜವಂಶಸ್ಥರ ಬಗ್ಗೆ ಸೊಗಸಾಗಿ ವಿವರಿಸುತ್ತಿದ್ದ ಅವರು, ಎಲ್ಲರನ್ನೂ ಬಹಳ ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು.
ಮೈಸೂರು ಸಂಸ್ಥಾನ ಹುಟ್ಟಿದ್ದು ಹೇಗೆ ಎಂಬುದನ್ನು ಇವರು ಸವಿವರವಾಗಿ ತಿಳಿಸಿದ್ದು, ಎಲ್ಲರಿಗೂ ಕೂಡ ಅರ್ಥವಾಗುವ ರೀತಿಯಲ್ಲಿ ಮಾಹಿತಿ ನೀಡುತ್ತಿದ್ದರು.
ಈಚನೂರು ಕುಮಾರ್ ನಿಧನಕ್ಕೆ ಪತ್ರಕರ್ತರು ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…
ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…
ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…