ಮೈಸೂರು ನಗರ

ಹುಲಿ ದಾಳಿಗೆ ರೈತ ಬಲಿ: ಘಟನೆ ಮರುಕಳಿಸದ ರೀತಿ ಕ್ರಮ ಎಂದ ಸಚಿವ ಎಚ್‌ಸಿಎಂ

ಮೈಸೂರು: ಹುಲಿ ದಾಳಿಗೆ ರೈತ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡುತ್ತೇವೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ. ಘಟನೆಗಳು ನಡೆಯಲು ಕಾಡು ಕ್ಷೀಣಿಸುತ್ತಿರುವುದು ಒಂದು ಪ್ರಮುಖ ಕಾರಣ. ಹುಲಿಗಳ ಸಂಖ್ಯೆ ಹೆಚ್ಚಳ ಮತ್ತೊಂದು ಕಾರಣವಾಗಿದೆ. ಗುಂಪು ಸೇರಿದಾಗ ಜನರು ಕೂಗಾಟ ನಡೆಸುತ್ತಾರೆ.

ಇದನ್ನು ಓದಿ: ಹುಲಿ ದಾಳಿಗೆ ರೈತ ಬಲಿ ಪ್ರಕರಣ: ಸಚಿವ ಈಶ್ವರ್‌ ಖಂಡ್ರೆಗೆ ರೈತರ ಘೇರಾವ್‌

ಇದರಿಂದ ಭಯಗೊಂಡ‌ ಕಾಡು ಪ್ರಾಣಿಗಳು ಏಕಾಏಕಿ ದಾಳಿ ಮಾಡುತ್ತವೆ. ಇದಕ್ಕೆಲ್ಲಾ ಸಭೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಎಚ್‌ಡಿ.ಕೋಟೆ ಭಾಗದಲ್ಲಿ ಅಕ್ರಮ ರೆಸಾರ್ಟ್‌ಗಳು ಹೆಚ್ಚಾಗಿವೆ. ಈ‌ ಕುರಿತು ಸಾಕಷ್ಟು ದೂರುಗಳು ಬಂದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಸರಗೂರಿನಲ್ಲಿ ಶವ ಇರಿಸಲು ವ್ಯವಸ್ಥೆ ಇಲ್ಲ. ಆ ಕಾರಣಕ್ಕೆ ಮೈಸೂರಿಗೆ ಶವ ತಂದಿದ್ದಾರೆ. ಇದು ಮಂತ್ರಿಗಳು ನೋಡಲಿ ಎಂಬ ಕಾರಣ ಅಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

2 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

2 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

2 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

2 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

2 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

2 hours ago