ಮೈಸೂರು ನಗರ

ಹುಲಿ ದಾಳಿಗೆ ರೈತ ಬಲಿ: ಘಟನೆ ಮರುಕಳಿಸದ ರೀತಿ ಕ್ರಮ ಎಂದ ಸಚಿವ ಎಚ್‌ಸಿಎಂ

ಮೈಸೂರು: ಹುಲಿ ದಾಳಿಗೆ ರೈತ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡುತ್ತೇವೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ. ಘಟನೆಗಳು ನಡೆಯಲು ಕಾಡು ಕ್ಷೀಣಿಸುತ್ತಿರುವುದು ಒಂದು ಪ್ರಮುಖ ಕಾರಣ. ಹುಲಿಗಳ ಸಂಖ್ಯೆ ಹೆಚ್ಚಳ ಮತ್ತೊಂದು ಕಾರಣವಾಗಿದೆ. ಗುಂಪು ಸೇರಿದಾಗ ಜನರು ಕೂಗಾಟ ನಡೆಸುತ್ತಾರೆ.

ಇದನ್ನು ಓದಿ: ಹುಲಿ ದಾಳಿಗೆ ರೈತ ಬಲಿ ಪ್ರಕರಣ: ಸಚಿವ ಈಶ್ವರ್‌ ಖಂಡ್ರೆಗೆ ರೈತರ ಘೇರಾವ್‌

ಇದರಿಂದ ಭಯಗೊಂಡ‌ ಕಾಡು ಪ್ರಾಣಿಗಳು ಏಕಾಏಕಿ ದಾಳಿ ಮಾಡುತ್ತವೆ. ಇದಕ್ಕೆಲ್ಲಾ ಸಭೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಎಚ್‌ಡಿ.ಕೋಟೆ ಭಾಗದಲ್ಲಿ ಅಕ್ರಮ ರೆಸಾರ್ಟ್‌ಗಳು ಹೆಚ್ಚಾಗಿವೆ. ಈ‌ ಕುರಿತು ಸಾಕಷ್ಟು ದೂರುಗಳು ಬಂದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಸರಗೂರಿನಲ್ಲಿ ಶವ ಇರಿಸಲು ವ್ಯವಸ್ಥೆ ಇಲ್ಲ. ಆ ಕಾರಣಕ್ಕೆ ಮೈಸೂರಿಗೆ ಶವ ತಂದಿದ್ದಾರೆ. ಇದು ಮಂತ್ರಿಗಳು ನೋಡಲಿ ಎಂಬ ಕಾರಣ ಅಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

6 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

6 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

6 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

6 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

6 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

6 hours ago