ಮೈಸೂರು: ಹುಲಿ ದಾಳಿಗೆ ರೈತ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡುತ್ತೇವೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ. ಘಟನೆಗಳು ನಡೆಯಲು ಕಾಡು ಕ್ಷೀಣಿಸುತ್ತಿರುವುದು ಒಂದು ಪ್ರಮುಖ ಕಾರಣ. ಹುಲಿಗಳ ಸಂಖ್ಯೆ ಹೆಚ್ಚಳ ಮತ್ತೊಂದು ಕಾರಣವಾಗಿದೆ. ಗುಂಪು ಸೇರಿದಾಗ ಜನರು ಕೂಗಾಟ ನಡೆಸುತ್ತಾರೆ.
ಇದನ್ನು ಓದಿ: ಹುಲಿ ದಾಳಿಗೆ ರೈತ ಬಲಿ ಪ್ರಕರಣ: ಸಚಿವ ಈಶ್ವರ್ ಖಂಡ್ರೆಗೆ ರೈತರ ಘೇರಾವ್
ಇದರಿಂದ ಭಯಗೊಂಡ ಕಾಡು ಪ್ರಾಣಿಗಳು ಏಕಾಏಕಿ ದಾಳಿ ಮಾಡುತ್ತವೆ. ಇದಕ್ಕೆಲ್ಲಾ ಸಭೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಎಚ್ಡಿ.ಕೋಟೆ ಭಾಗದಲ್ಲಿ ಅಕ್ರಮ ರೆಸಾರ್ಟ್ಗಳು ಹೆಚ್ಚಾಗಿವೆ. ಈ ಕುರಿತು ಸಾಕಷ್ಟು ದೂರುಗಳು ಬಂದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಸರಗೂರಿನಲ್ಲಿ ಶವ ಇರಿಸಲು ವ್ಯವಸ್ಥೆ ಇಲ್ಲ. ಆ ಕಾರಣಕ್ಕೆ ಮೈಸೂರಿಗೆ ಶವ ತಂದಿದ್ದಾರೆ. ಇದು ಮಂತ್ರಿಗಳು ನೋಡಲಿ ಎಂಬ ಕಾರಣ ಅಲ್ಲ ಎಂದು ಹೇಳಿದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…