ಮೈಸೂರು ನಗರ

ಕೆಐಎಡಿಬಿ ಕಚೇರಿ ಮುಂಭಾಗ ರೈತರ ಪ್ರತಿಭಟನೆ

ಎಚ್.ಎಸ್.ದಿನೇಶ್‌ ಕುಮಾರ್‌

ಮೈಸೂರು: ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಇದುವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಭೂಮಿ ಕಳೆದುಕೊಂಡವರು ಮಂಗಳವಾರ ಕೆಐಎಡಿಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಬದನಗುಪ್ಪೆ ಸುತ್ತಮುತ್ತಲಿನಲ್ಲಿ ಜಮೀನುಗಳನ್ನು ಹತ್ತು ವರ್ಷಗಳ ಹಿಂದೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೆ, ಸಾಕಷ್ಟು ಜನರಿಗೆ ಇಂದಿಗೂ ಕೋಟ್ಯಾಂತರ ರೂ. ಪರಿಹಾರ ವಿತರಣೆಯಾಗಿಲ್ಲ ಎಂದು ರೈತರು ಗಂಭೀರ ಆರೋಪ ಮಾಡಿದರು.

ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ ಅಧಿಕಾರಿಗಳು ಮಾತ್ರ ಕ್ಯಾರೇ ಎಂದಿಲ್ಲ. ಈ ಹಿನ್ನೆಲೆಯಲ್ಲಿ ಬದನಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಶ್ ನೇತೃತ್ವದಲ್ಲಿ ಪರಿಹಾರ ಪಡೆಯಬೇಕಾಗಿರುವ ಪುಟ್ಟನಂಜಮ್ಮ, ಪುಟ್ಟತಾಯಮ್ಮ, ಬಸವನಾಯಕ, ಮಹದೇವನಾಯಕ ಅವರುಗಳು ನಮಗೆ ಹಣ ನೀಡುವಂತೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಈ ವೇಳೆ ಮಾತನಾಡಿದ ಮಲ್ಲೇಶ್ ಅವರು, ಪುಟ್ಟನಂಜಮ್ಮ ಅವರಿಗೆ ೧.೪೫ ಕೋಟಿ ರೂ, ಪುಟ್ಟತಾಯಮ್ಮ, ಮಹದೇವನಾಯಕ, ಬಸವನಾಯಕ ಅವರಿಗೆ ೧.೦೬ ಕೋಟಿ ರೂ. ಪರಿಹಾರ ಬಾಕಿ ಇದೆ. ಇದರ ಜೊತೆಗೆ ಇನ್ನೂ ಅನೇಕರಿಗೆ ಪರಿಹಾರ ವಿತರಣೆ ಆಗಿಲ್ಲ ಎಂದು ಆರೋಪಿಸಿದರು.

ನಂತರ ಅವರುಗಳು ಕೆಐಎಡಿಬಿ ಅಧಿಕಾರಿಗಳನ್ನು ಭೇಟಿಯಾಗಿ ಹಣ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಹಣದ ಚೆಕ್ ನೀಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ಅಂತಿಮವಾಗಿ ಬುಧವಾರ ಚೆಕ್ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆದರು.

ಆಚೆ ಕಳುಹಿಸಿ; ಇದು ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿ ಎನ್.ಸಿ.ವೆಂಕಟರಾಜು ಅವರ ಅಣಿಮುತ್ತು. ರೈತರಿಗೆ ನೀಡಬೇಕಾದ ಪರಿಹಾರದ ಹಣ ನೀಡದ ಬಗ್ಗೆ ವರದಿ ಮಾಡಲು ತೆರಳಿದ್ದ ಮಾಧ್ಯಮದವರನ್ನು ಗಮನಿಸಿದ ಅವರು, ಅವರೇಕೆ ಇಲ್ಲಿ ಬಂದಿದ್ದಾರೆ. ಅವರನ್ನು ಆಚೆ ಕಳುಹಿಸಿ ಎಂದು ತಮ್ಮ ಸಿಬ್ಬಂದಿಗೆ ಸೂಚನೆ ನೀಡಿದರು. ಅವರ ಮಾತಿಗೆ ವಿರೋಧ ವ್ಯಕ್ತಪಡಿಸಿದ ರೈತರು ಅವರಿಗೆ ನಾವೇ ವಿಷಯ ತಿಳಿಸಿದ್ದು, ಮೊದಲು ಪರಿಹಾರ ನೀಡಿ ನಂತರ ಬೇರೆಯದ್ದು ಮಾತನಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

48 mins ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

2 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

3 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

3 hours ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

3 hours ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

4 hours ago