ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕುತ್ತಿದ್ದಾರೆ ಎಂಬ ವಿಚಾರಕ್ಕೆ ಪರ-ವಿರೋಧ ಕೇಳಿ ಬಂದಿತ್ತು. ಆದರೆ. ಇದೀಗ ಅದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದ ಸಭೆಯಲ್ಲಿ ತೆರೆಬಿದ್ದಿದೆ.
ಅರಮನೆ ಆವರಣದಲ್ಲಿ ಪಾರಿವಾಳಗಳಿಗೆ ಸಾರ್ವಜನಿಕರು ಪ್ರತಿದಿನ ಆಹಾರ ಹಾಕುವುದರಿಂದ ಪಾರಂಪರಿಕ ಕಟ್ಟಡಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ ಕೆಲವು ಸಂಘಟನೆಗಳು ಆಹಾರ ಹಾಕುವುದನ್ನು ನಿಲ್ಲಿಸುವಂತೆ ಸಂಸದರಿಗೆ ಒತ್ತಾಯಿಸಿದ್ದು, ಇದಕ್ಕೆ ಪರ-ವಿರೋಧಗಳು ಕೇಳಿ ಬಂದಿದ್ದವು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇಂದು (ಸೆ.22) ನಾಗರೀಕರ ಸಭೆ ಸಂಸದ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸಮ್ಮುಖದಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವ ಪದ್ಧತಿ ರದ್ಧತಿ ಹಾಗೂ ಕಾಳು ಹಾಕುವುದರಿಂದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ʼನಾಗರೀಕರ ಜಾಗೃತ ಸಭೆʼ ನಡೆಯಿತು
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಅವರು, ತಜ್ಞರು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಪರ-ವಿರೋಧದ ಚರ್ಚೆಯ ನಂತರ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸುತ್ತೇವೆ ಎಂಬುದಾಗಿ ಖಬೂತರ್ ದಾನ್ ಜೈನ್ ಸಂಘಟನೆ ಹೇಳಿದೆ. ಕಾರ್ಯಕ್ರಮದಲ್ಲಿ ಸಾಮಾಜಿಕ ತಜ್ಞರು, ಪರಿಸರವಾದಿಗಳು ಹಾಗೂ ವೈದ್ಯರು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…