ಮೈಸೂರು: ಸಾರ್ವಜನಿಕರು ಹಣ ನೀಡಿ ಆಹಾರ ಪದಾರ್ಥ ಖರೀದಿಸುತ್ತಾರೆ. ಅವರಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಬೇಕಿರುವುದು ಮಾರಾಟಗಾರರ ಕೆಲಸವಾಗಿರುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆಹಾರ ಪದಾರ್ಥ ಮಾರಾಟ ಕಂಡುಬಂದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಿಯಮದಂತೆ ಪ್ರಕರಣ ದಾಖಲಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಶಿವರಾಜು ಪಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006ರ ಅನುಷ್ಠನದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೈಸೂರು ನಗರ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಪರಿಶೀಲಿಸಲು 3 ವೃತ್ತಕ್ಕೆ ಅಧಿಕಾರಿಗಳಿದ್ದು, ಆಹಾರ ಗುಣಮಟ್ಟದ ಪರಿಶೀಲನೆಯ ಸರ್ವೆಗಳು ಅಕ್ಟೋಬರ್ 2025 ರಿಂದ ಡಿಸೆಂಬರ್ 2025ರವರೆಗೆ 130 ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಸರ್ವೆ ನಡೆಸಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು ಎಂದರು.
ಬೀದಿ ಬದಿ ಆಹಾರ ಪದಾರ್ಥ ಮಾರಾಟ ಮಾಡುವ ಸ್ಥಳಗಳಲ್ಲಿ ಜನರು ಹೆಚ್ಚು ಆಹಾರ ಸೇವಿಸುತ್ತಾರೆ. ಈ ಸ್ಥಳಗಳಲ್ಲಿ ಮುಂದಿನ ದಿನಗಳಲ್ಲಿ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.
ಆಹಾರ ಸುರಕ್ಷತಾ ಕಚೇರಿಯ ಎಫ್.ಎಸ್.ಎಸ್.ಎ.ಐ ವೆಬ್ ಸೈಟ್ ನಲ್ಲಿ 1.5 ಕೋಟಿ ರೂ ಕ್ಕಿಂತ ಹೆಚ್ಚಿನ ವಹಿವಾಟು ಮಾಡುವ ಆಹಾರ ಮಾರಾಟಗಾರರು ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬೇಕು 1.5 ಕೋಟಿಕ್ಕಿಂತ ಕಡಿಮೆ ವಹಿವಾಟು ಮಾಡುವವರು ನೊಂದಣಿ ಮಾಡಿಕೊಳ್ಳಬೇಕು ಎಂದರು.
ಕುರುಕಲು ತಿಂಡಿ ಸೇರಿದಂತೆ ಹಲವಾರು ಆಹಾರ ಪದಾರ್ಥಗಳನ್ನು ಎರಡು, ಮೂರು ಅಥವಾ ಹೆಚ್ಚು ಬಾರಿ ಕಾಯಿಸಿ ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೋಟೆಲ್, ಆಹಾರ ಮಾರಾಟ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದಾಗ ತೀವ್ರ ನಿಗಾ ವಹಿಸಿ, ರಾಸಾಯನಿಕ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಮಾರಾಟಗಾರರು ಎಣ್ಣೆ ಖರೀದಿಸಿರುವುದು, ಬಳಸಿರುವುದು, ಉಳಿಕೆಯನ್ನು ವಿಲೇವಾರಿ ಮಾಡಿರುವುದನ್ನು ಪರಿಶೀಲಿಸಿ ಎಂದರು.
ಮೈಸೂರು ಮಹಾನಗರ ಪಾಲಿಕೆಯ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತದ ಅಂಕಿತ ಅಧಿಕಾರಿ ಡಾ: ರವೀಂದ್ರ ಎಸ್.ಎಲ್ ಅವರು ಮಾತನಾಡಿ ಇಲಾಖೆಯಿಂದ ಜೆ.ಎಂ.ಎಫ್.ಸಿ ನ್ಯಾಯಲಯದಲ್ಲಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಲಾಗಿದೆ. 6 ಪ್ರಕರಣಗಳು ಇತ್ಯರ್ಥವಾಗಿ 70000 ದಂಡ ವಿಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಗೋಪಿನಾಥ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಲಿಂಗರಾಜು, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಹೆಚ್.ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…