ಮೈಸೂರು ನಗರ

ಗುಣಮಟ್ಟದ ಆಹಾರ ಮಾರಾಟ ಮಾಡದಿದ್ದಲ್ಲಿ ಪ್ರಕರಣ ದಾಖಲಿಸಿ: ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಪಿ

ಮೈಸೂರು: ಸಾರ್ವಜನಿಕರು ಹಣ ನೀಡಿ ಆಹಾರ ಪದಾರ್ಥ ಖರೀದಿಸುತ್ತಾರೆ. ಅವರಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಬೇಕಿರುವುದು ಮಾರಾಟಗಾರರ ಕೆಲಸವಾಗಿರುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆಹಾರ ಪದಾರ್ಥ ಮಾರಾಟ ಕಂಡುಬಂದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಿಯಮದಂತೆ ಪ್ರಕರಣ ದಾಖಲಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಶಿವರಾಜು ಪಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006ರ ಅನುಷ್ಠನದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೈಸೂರು ನಗರ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಪರಿಶೀಲಿಸಲು 3 ವೃತ್ತಕ್ಕೆ ಅಧಿಕಾರಿಗಳಿದ್ದು, ಆಹಾರ ಗುಣಮಟ್ಟದ ಪರಿಶೀಲನೆಯ ಸರ್ವೆಗಳು ಅಕ್ಟೋಬರ್‌ 2025 ರಿಂದ ಡಿಸೆಂಬರ್ 2025ರವರೆಗೆ 130 ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಸರ್ವೆ ನಡೆಸಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು ಎಂದರು‌.

ಬೀದಿ ಬದಿ ಆಹಾರ ಪದಾರ್ಥ ಮಾರಾಟ ಮಾಡುವ ಸ್ಥಳಗಳಲ್ಲಿ ಜನರು ಹೆಚ್ಚು ಆಹಾರ ಸೇವಿಸುತ್ತಾರೆ. ಈ ಸ್ಥಳಗಳಲ್ಲಿ ಮುಂದಿನ ದಿನಗಳಲ್ಲಿ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಆಹಾರ ಸುರಕ್ಷತಾ ಕಚೇರಿಯ ಎಫ್.ಎಸ್.ಎಸ್.ಎ.ಐ ವೆಬ್ ಸೈಟ್ ನಲ್ಲಿ 1.5 ಕೋಟಿ ರೂ ಕ್ಕಿಂತ ಹೆಚ್ಚಿನ ವಹಿವಾಟು ಮಾಡುವ‌ ಆಹಾರ ಮಾರಾಟಗಾರರು ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬೇಕು 1.5 ಕೋಟಿಕ್ಕಿಂತ ಕಡಿಮೆ ವಹಿವಾಟು ಮಾಡುವವರು ನೊಂದಣಿ ಮಾಡಿಕೊಳ್ಳಬೇಕು‌ ಎಂದರು.

ಕುರುಕಲು‌ ತಿಂಡಿ ಸೇರಿದಂತೆ ಹಲವಾರು ಆಹಾರ ಪದಾರ್ಥಗಳನ್ನು ಎರಡು, ಮೂರು ಅಥವಾ ಹೆಚ್ಚು ಬಾರಿ ಕಾಯಿಸಿ ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೋಟೆಲ್, ಆಹಾರ ಮಾರಾಟ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದಾಗ ತೀವ್ರ ನಿಗಾ ವಹಿಸಿ, ರಾಸಾಯನಿಕ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಮಾರಾಟಗಾರರು ಎಣ್ಣೆ ಖರೀದಿಸಿರುವುದು, ಬಳಸಿರುವುದು, ಉಳಿಕೆಯನ್ನು ವಿಲೇವಾರಿ ಮಾಡಿರುವುದನ್ನು ಪರಿಶೀಲಿಸಿ ಎಂದರು.

ಮೈಸೂರು ಮಹಾನಗರ ಪಾಲಿಕೆಯ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತದ ಅಂಕಿತ ಅಧಿಕಾರಿ ಡಾ: ರವೀಂದ್ರ ಎಸ್.ಎಲ್ ಅವರು‌ ಮಾತನಾಡಿ ಇಲಾಖೆಯಿಂದ ಜೆ.ಎಂ‌.ಎಫ್.ಸಿ ನ್ಯಾಯಲಯದಲ್ಲಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಲಾಗಿದೆ. 6 ಪ್ರಕರಣಗಳು ಇತ್ಯರ್ಥವಾಗಿ 70000 ದಂಡ ವಿಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಗೋಪಿನಾಥ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ‌ ಅಧ್ಯಕ್ಷ ಲಿಂಗರಾಜು, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಹೆಚ್.ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago