ಮೈಸೂರು ನಗರ

ಗುಣಮಟ್ಟದ ಆಹಾರ ಮಾರಾಟ ಮಾಡದಿದ್ದಲ್ಲಿ ಪ್ರಕರಣ ದಾಖಲಿಸಿ: ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಪಿ

ಮೈಸೂರು: ಸಾರ್ವಜನಿಕರು ಹಣ ನೀಡಿ ಆಹಾರ ಪದಾರ್ಥ ಖರೀದಿಸುತ್ತಾರೆ. ಅವರಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಬೇಕಿರುವುದು ಮಾರಾಟಗಾರರ ಕೆಲಸವಾಗಿರುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆಹಾರ ಪದಾರ್ಥ ಮಾರಾಟ ಕಂಡುಬಂದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಿಯಮದಂತೆ ಪ್ರಕರಣ ದಾಖಲಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಶಿವರಾಜು ಪಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006ರ ಅನುಷ್ಠನದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೈಸೂರು ನಗರ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಪರಿಶೀಲಿಸಲು 3 ವೃತ್ತಕ್ಕೆ ಅಧಿಕಾರಿಗಳಿದ್ದು, ಆಹಾರ ಗುಣಮಟ್ಟದ ಪರಿಶೀಲನೆಯ ಸರ್ವೆಗಳು ಅಕ್ಟೋಬರ್‌ 2025 ರಿಂದ ಡಿಸೆಂಬರ್ 2025ರವರೆಗೆ 130 ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಸರ್ವೆ ನಡೆಸಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು ಎಂದರು‌.

ಬೀದಿ ಬದಿ ಆಹಾರ ಪದಾರ್ಥ ಮಾರಾಟ ಮಾಡುವ ಸ್ಥಳಗಳಲ್ಲಿ ಜನರು ಹೆಚ್ಚು ಆಹಾರ ಸೇವಿಸುತ್ತಾರೆ. ಈ ಸ್ಥಳಗಳಲ್ಲಿ ಮುಂದಿನ ದಿನಗಳಲ್ಲಿ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಆಹಾರ ಸುರಕ್ಷತಾ ಕಚೇರಿಯ ಎಫ್.ಎಸ್.ಎಸ್.ಎ.ಐ ವೆಬ್ ಸೈಟ್ ನಲ್ಲಿ 1.5 ಕೋಟಿ ರೂ ಕ್ಕಿಂತ ಹೆಚ್ಚಿನ ವಹಿವಾಟು ಮಾಡುವ‌ ಆಹಾರ ಮಾರಾಟಗಾರರು ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬೇಕು 1.5 ಕೋಟಿಕ್ಕಿಂತ ಕಡಿಮೆ ವಹಿವಾಟು ಮಾಡುವವರು ನೊಂದಣಿ ಮಾಡಿಕೊಳ್ಳಬೇಕು‌ ಎಂದರು.

ಕುರುಕಲು‌ ತಿಂಡಿ ಸೇರಿದಂತೆ ಹಲವಾರು ಆಹಾರ ಪದಾರ್ಥಗಳನ್ನು ಎರಡು, ಮೂರು ಅಥವಾ ಹೆಚ್ಚು ಬಾರಿ ಕಾಯಿಸಿ ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೋಟೆಲ್, ಆಹಾರ ಮಾರಾಟ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದಾಗ ತೀವ್ರ ನಿಗಾ ವಹಿಸಿ, ರಾಸಾಯನಿಕ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಮಾರಾಟಗಾರರು ಎಣ್ಣೆ ಖರೀದಿಸಿರುವುದು, ಬಳಸಿರುವುದು, ಉಳಿಕೆಯನ್ನು ವಿಲೇವಾರಿ ಮಾಡಿರುವುದನ್ನು ಪರಿಶೀಲಿಸಿ ಎಂದರು.

ಮೈಸೂರು ಮಹಾನಗರ ಪಾಲಿಕೆಯ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತದ ಅಂಕಿತ ಅಧಿಕಾರಿ ಡಾ: ರವೀಂದ್ರ ಎಸ್.ಎಲ್ ಅವರು‌ ಮಾತನಾಡಿ ಇಲಾಖೆಯಿಂದ ಜೆ.ಎಂ‌.ಎಫ್.ಸಿ ನ್ಯಾಯಲಯದಲ್ಲಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಲಾಗಿದೆ. 6 ಪ್ರಕರಣಗಳು ಇತ್ಯರ್ಥವಾಗಿ 70000 ದಂಡ ವಿಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಗೋಪಿನಾಥ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ‌ ಅಧ್ಯಕ್ಷ ಲಿಂಗರಾಜು, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಹೆಚ್.ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

5 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

8 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

9 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

10 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

10 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

10 hours ago