ಮೈಸೂರು ನಗರ

MLC ಮಂಜೇಗೌಡರ ಮೇಲೂ ದೂರು ದಾಖಲಿಸಿ: ಕಾಂಗ್ರೆಸ್‌ ಜಿಲ್ಲಾ ವಕ್ತಾರ ರಾಜೇಶ್‌ ಸವಾಲು

ಮೈಸೂರು: ಎಂಎಲ್‌ಸಿ ಮಂಜೇಗೌಡರೂ ಕೂಡ ಮೂಡಾ (MUDA)ದಲ್ಲಿ ಅಕ್ರಮ ನಿವೇಶನ ಪಡೆದಿದ್ದಾರೆ ಎಂದು ಜಾರಿ ನಿರ್ದೇಶಾನಾಲಯ (ಇಡಿ) ಹೇಳುತ್ತಿದೆ. ತಾಕತ್ತಿದ್ದರೆ ಅವರ ಮೇಲೂ ದೂರು ದಾಖಲಿಸಿ ಎಂದು ಸ್ನೇಹಮಯಿ ಕೃಷ್ಣಗೆ ಕಾಂಗ್ರೆಸ್‌ ಜಿಲ್ಲಾ ವಕ್ತಾರ ರಾಜೇಶ್‌ ಸವಾಲು ಹಾಕಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇರದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಸಿ ಮುಡಾ ಪ್ರಕರಣದಲ್ಲಿ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಅವರ ಪರ ಮಾತನಾಡಿದ ಜಿಟಿ ದೇವೆಗೌಡರು ಮೇಲೂ ದೂರು ದಾಖಲಿಸಿ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಇದೆಲ್ಲಾ ಕುಮಾರಸ್ವಾಮಿ ಅವರ ಪಿತೂರಿಯಿಂದ ನಡೆಯುತ್ತಿದೆ ಎಂದು ಹೇಳಿದರು.

ಈಗ ಎಂಎಲ್‌ಸಿ ಮಂಜೇಗೌಡರೂ ಮುಡಾ ಅಕ್ರಮ ನಿವೇಶನದಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ಹೇಳುತ್ತಿದೆ. ಸಾಮಾಜಿಕ ಕಳಕಳಿ ಇದ್ದರೆ ಅವರ ಮೇಲೂ ದೂರು ದಾಖಲಿಸಿ. ಅವರ ವಿರುದ್ಧವೂ ಹೋರಾಟ ಮಾಡಿ. ಸಿದ್ದರಾಮಯ್ಯ ಅವರನ್ನೇ ಯಾಕೆ ಟಾರ್ಗೆಟ್‌ ಮಾಡಿ ಕಟ್ಟಿ ಹಾಕುವ ಷಡ್ಯಂತ್ರ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು.

ಎಚ್‌ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿದ ವಿಚಾರಕ್ಕೆ ಕೋರ್ಟ್‌ ಅವರಿಗೆ ಛೀಮಾರಿ ಹಾಕಿದೆ. ನೀವೆ ಅಕ್ರಮದಲ್ಲಿ ಭಾಗಿಯಾಗಿ ಇನ್ನೊಬ್ಬರ ಮೇಲೆ ಯಾವ ನೈತಿಕತೆ ಇಟ್ಟುಕೊಂಡು ಆರೋಪ ಮಾಡುತ್ತೀರಿ? ಎಂದು ಸ್ನೇಹಮಯಿ ಕೃಷ್ಣ ವಿರುದ್ಧ ರಾಜೇಶ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪರಮೇಶ್ವರ್‌

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌…

23 mins ago

ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಸುನೇತ್ರಾ ಪವಾರ್‌ ಅಧಿಕಾರ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್‌ ಪವಾರ್‌…

37 mins ago

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…

40 mins ago

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…

46 mins ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರಕರಣವೊಂದರ ಆರೋಪಿ ಸೆರೆ

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…

50 mins ago

ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…

2 hours ago