ಮೈಸೂರು: ಎಂಎಲ್ಸಿ ಮಂಜೇಗೌಡರೂ ಕೂಡ ಮೂಡಾ (MUDA)ದಲ್ಲಿ ಅಕ್ರಮ ನಿವೇಶನ ಪಡೆದಿದ್ದಾರೆ ಎಂದು ಜಾರಿ ನಿರ್ದೇಶಾನಾಲಯ (ಇಡಿ) ಹೇಳುತ್ತಿದೆ. ತಾಕತ್ತಿದ್ದರೆ ಅವರ ಮೇಲೂ ದೂರು ದಾಖಲಿಸಿ ಎಂದು ಸ್ನೇಹಮಯಿ ಕೃಷ್ಣಗೆ ಕಾಂಗ್ರೆಸ್ ಜಿಲ್ಲಾ ವಕ್ತಾರ ರಾಜೇಶ್ ಸವಾಲು ಹಾಕಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇರದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಸಿ ಮುಡಾ ಪ್ರಕರಣದಲ್ಲಿ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಅವರ ಪರ ಮಾತನಾಡಿದ ಜಿಟಿ ದೇವೆಗೌಡರು ಮೇಲೂ ದೂರು ದಾಖಲಿಸಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದೆಲ್ಲಾ ಕುಮಾರಸ್ವಾಮಿ ಅವರ ಪಿತೂರಿಯಿಂದ ನಡೆಯುತ್ತಿದೆ ಎಂದು ಹೇಳಿದರು.
ಈಗ ಎಂಎಲ್ಸಿ ಮಂಜೇಗೌಡರೂ ಮುಡಾ ಅಕ್ರಮ ನಿವೇಶನದಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ಹೇಳುತ್ತಿದೆ. ಸಾಮಾಜಿಕ ಕಳಕಳಿ ಇದ್ದರೆ ಅವರ ಮೇಲೂ ದೂರು ದಾಖಲಿಸಿ. ಅವರ ವಿರುದ್ಧವೂ ಹೋರಾಟ ಮಾಡಿ. ಸಿದ್ದರಾಮಯ್ಯ ಅವರನ್ನೇ ಯಾಕೆ ಟಾರ್ಗೆಟ್ ಮಾಡಿ ಕಟ್ಟಿ ಹಾಕುವ ಷಡ್ಯಂತ್ರ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು.
ಎಚ್ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿದ ವಿಚಾರಕ್ಕೆ ಕೋರ್ಟ್ ಅವರಿಗೆ ಛೀಮಾರಿ ಹಾಕಿದೆ. ನೀವೆ ಅಕ್ರಮದಲ್ಲಿ ಭಾಗಿಯಾಗಿ ಇನ್ನೊಬ್ಬರ ಮೇಲೆ ಯಾವ ನೈತಿಕತೆ ಇಟ್ಟುಕೊಂಡು ಆರೋಪ ಮಾಡುತ್ತೀರಿ? ಎಂದು ಸ್ನೇಹಮಯಿ ಕೃಷ್ಣ ವಿರುದ್ಧ ರಾಜೇಶ ಕಿಡಿಕಾರಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…