ಮೈಸೂರು ನಗರ

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.

ಪ್ರತಿ ವರ್ಷದಂತೆ ಈ ಬಾರಿ ಕೂಡ ಫಲಪುಷ್ಪ ಪ್ರದರ್ಶನವು ಪ್ರವಾಸಿಗರು ಹಾಗೂ ಮೈಸೂರಿಗರ ಕಣ್ಮನ ಸೆಳೆಯುವ ರೀತಿಯಲ್ಲಿ ರೂಪುಗೊಳ್ಳುತ್ತಿದ್ದು, ಬಗೆ ಬಗೆಯ ಕಲಾತ್ಮಕ ಮಾದರಿಗಳು ಪ್ರದರ್ಶನದಲ್ಲಿ ಗಮನ ಸೆಳೆಯಲಿವೆ. ಹೂಗಳಿಂದ ಸೃಷ್ಟಿಸಲಾಗಿರುವ ವಿಶಿಷ್ಟ ಪ್ರತಿಕೃತಿಗಳನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.

ಈ ವರ್ಷದ ಫಲಪುಷ್ಪ ಪ್ರದರ್ಶನದಲ್ಲಿ ಶೃಂಗೇರಿ ಶಾರದಾಂಬೆ ದೇಗುಲ, ಸಾಲುಮರದ ತಿಮ್ಮಕ್ಕ, ಮುಮ್ಮಡಿ ಕೃಷ್ಣರಾಜ ಒಡೆಯರ್, ಭಾರತದ ಸಂವಿಧಾನದ ಪೀಠಿಕೆ, ಕಾಳಿಂಗ ಮರ್ದನ ಸೇರಿದಂತೆ ಹಲವು ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮಹತ್ವ ಹೊಂದಿರುವ ಮಾದರಿಗಳನ್ನು ಹೂಗಳ ಮೂಲಕ ನಿರ್ಮಿಸಲಾಗಿದೆ.

ಇದನ್ನೂ ಓದಿ:-ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಪ್ರತಿಕೃತಿಗಳ ತಯಾರಿಕೆಗೆ ಸುಮಾರು 25 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಸಲಾಗಿದ್ದು, ಹತ್ತು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನವು ಸಾರ್ವಜನಿಕರಿಗೆ ವಿಶಿಷ್ಟ ಅನುಭವ ನೀಡಲಿದೆ.

ಫಲಪುಷ್ಪ ಪ್ರದರ್ಶನದ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಮಾಗಿ ಉತ್ಸವಕ್ಕೆ ಹೆಚ್ಚಿನ ರಂಗು ತುಂಬಲಿದೆ.

ಈ ಕುರಿತು ಮಾತನಾಡಿದ ತೋಟಗಾರಿಕೆ ಇಲಾಖೆ ಅಧಿಕಾರಿ ಯೋಗೀಶ್, “ಪ್ರವಾಸಿಗರಿಗೆ ಆಕರ್ಷಕ ಅನುಭವ ನೀಡುವ ಉದ್ದೇಶದಿಂದ ಎಲ್ಲ ಸಿದ್ಧತೆಗಳನ್ನು ಅಂತಿಮ ಹಂತಕ್ಕೆ ತಲುಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನವು ಈ ಬಾರಿ ಕೂಡ ಮೈಸೂರಿನ ಸಾಂಸ್ಕೃತಿಕ ವೈಭವಕ್ಕೆ ಮತ್ತೊಂದು ಮೆರಗು ನೀಡುವ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

ಮಿರ್ಜಾಪುರದಲ್ಲಿ ಸರಣಿ ಅಪಘಾತ: 11 ಮಂದಿ ಸಾವು

ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…

39 mins ago

ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್‌ ಮತ್ತು…

53 mins ago

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…

1 hour ago

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

2 hours ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…

2 hours ago