ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.
ಪ್ರತಿ ವರ್ಷದಂತೆ ಈ ಬಾರಿ ಕೂಡ ಫಲಪುಷ್ಪ ಪ್ರದರ್ಶನವು ಪ್ರವಾಸಿಗರು ಹಾಗೂ ಮೈಸೂರಿಗರ ಕಣ್ಮನ ಸೆಳೆಯುವ ರೀತಿಯಲ್ಲಿ ರೂಪುಗೊಳ್ಳುತ್ತಿದ್ದು, ಬಗೆ ಬಗೆಯ ಕಲಾತ್ಮಕ ಮಾದರಿಗಳು ಪ್ರದರ್ಶನದಲ್ಲಿ ಗಮನ ಸೆಳೆಯಲಿವೆ. ಹೂಗಳಿಂದ ಸೃಷ್ಟಿಸಲಾಗಿರುವ ವಿಶಿಷ್ಟ ಪ್ರತಿಕೃತಿಗಳನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.
ಈ ವರ್ಷದ ಫಲಪುಷ್ಪ ಪ್ರದರ್ಶನದಲ್ಲಿ ಶೃಂಗೇರಿ ಶಾರದಾಂಬೆ ದೇಗುಲ, ಸಾಲುಮರದ ತಿಮ್ಮಕ್ಕ, ಮುಮ್ಮಡಿ ಕೃಷ್ಣರಾಜ ಒಡೆಯರ್, ಭಾರತದ ಸಂವಿಧಾನದ ಪೀಠಿಕೆ, ಕಾಳಿಂಗ ಮರ್ದನ ಸೇರಿದಂತೆ ಹಲವು ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮಹತ್ವ ಹೊಂದಿರುವ ಮಾದರಿಗಳನ್ನು ಹೂಗಳ ಮೂಲಕ ನಿರ್ಮಿಸಲಾಗಿದೆ.
ಇದನ್ನೂ ಓದಿ:-ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನ
ಪ್ರತಿಕೃತಿಗಳ ತಯಾರಿಕೆಗೆ ಸುಮಾರು 25 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಸಲಾಗಿದ್ದು, ಹತ್ತು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನವು ಸಾರ್ವಜನಿಕರಿಗೆ ವಿಶಿಷ್ಟ ಅನುಭವ ನೀಡಲಿದೆ.
ಫಲಪುಷ್ಪ ಪ್ರದರ್ಶನದ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಮಾಗಿ ಉತ್ಸವಕ್ಕೆ ಹೆಚ್ಚಿನ ರಂಗು ತುಂಬಲಿದೆ.
ಈ ಕುರಿತು ಮಾತನಾಡಿದ ತೋಟಗಾರಿಕೆ ಇಲಾಖೆ ಅಧಿಕಾರಿ ಯೋಗೀಶ್, “ಪ್ರವಾಸಿಗರಿಗೆ ಆಕರ್ಷಕ ಅನುಭವ ನೀಡುವ ಉದ್ದೇಶದಿಂದ ಎಲ್ಲ ಸಿದ್ಧತೆಗಳನ್ನು ಅಂತಿಮ ಹಂತಕ್ಕೆ ತಲುಪಿಸಲಾಗಿದೆ” ಎಂದು ಮಾಹಿತಿ ನೀಡಿದರು.
ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನವು ಈ ಬಾರಿ ಕೂಡ ಮೈಸೂರಿನ ಸಾಂಸ್ಕೃತಿಕ ವೈಭವಕ್ಕೆ ಮತ್ತೊಂದು ಮೆರಗು ನೀಡುವ ನಿರೀಕ್ಷೆಯಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…