ಮೈಸೂರು: ಮದ್ಯದ ಅಮಲಿನಲ್ಲಿ ಬಾಮೈದನನ್ನೇ ಭಾವ ಕೊಚ್ಚಿ ಕೊಲೆಗೈದ ಘಟನೆ ನಗರದ ಮೇಟಗಳ್ಳಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ ಮನೋಜ್ ( 26) ಹತ್ಯೆಯಾದ ವ್ಯಕ್ತಿ. ವಿನೋದ್ ಬಾಮೈದನನ್ನ ಕೊಲೆಗೈದ ಬಾವ.
ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳವಾಗುತ್ತಿತ್ತು. ಮನೋಜ್ ಎಣ್ಣೆ ಹೊಡೆದುಕೊಂಡು ಮನೆಗೆ ಬಂದು ಗಲಾಟೆ ಮಾಡುತ್ತಿದ್ದ. ಮನೋಜ್ ಉಪಟಳ ತಾಳಲಾರದೆ, ಟ್ರೂ ಸ್ಪಿರಿಟ್ ಬಾರ್ ನಲ್ಲಿ ಎಣ್ಣೆ ಹೊಡೆದು ಗಲಾಟೆ ನಡೆದ ನಂತರ ವಿನೋದ್ ಕೃತ್ಯವೆಸಗಿದ್ದಾನೆ.
ಬಾರ್ನಲ್ಲಿ ರೂಮ್ ಬಾಡಿಗೆ ಪಡೆದು ಜೊತೆಯಲ್ಲೆ ಎಣ್ಣೆ ಹೊಡೆದಿದ್ದರು. ಕಂಠಪೂರ್ತಿ ಕುಡಿಸಿ ಪ್ರಜ್ಞೆ ತಪ್ಪಿದ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಬಾವ ವಿನೋದ್ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಎಫ್ಎಸ್ ಎಲ್ ತಂಡದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಮೇಟಗಳ್ಳಿ ಪೊಲೀಸರು ವಿನೋಧ್ಗೆ ಬಲೆ ಬೀಸಿದ್ದಾರೆ.
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…
ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್…