ಮೈಸೂರು: ಮದ್ಯದ ಅಮಲಿನಲ್ಲಿ ಬಾಮೈದನನ್ನೇ ಭಾವ ಕೊಚ್ಚಿ ಕೊಲೆಗೈದ ಘಟನೆ ನಗರದ ಮೇಟಗಳ್ಳಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ ಮನೋಜ್ ( 26) ಹತ್ಯೆಯಾದ ವ್ಯಕ್ತಿ. ವಿನೋದ್ ಬಾಮೈದನನ್ನ ಕೊಲೆಗೈದ ಬಾವ.
ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳವಾಗುತ್ತಿತ್ತು. ಮನೋಜ್ ಎಣ್ಣೆ ಹೊಡೆದುಕೊಂಡು ಮನೆಗೆ ಬಂದು ಗಲಾಟೆ ಮಾಡುತ್ತಿದ್ದ. ಮನೋಜ್ ಉಪಟಳ ತಾಳಲಾರದೆ, ಟ್ರೂ ಸ್ಪಿರಿಟ್ ಬಾರ್ ನಲ್ಲಿ ಎಣ್ಣೆ ಹೊಡೆದು ಗಲಾಟೆ ನಡೆದ ನಂತರ ವಿನೋದ್ ಕೃತ್ಯವೆಸಗಿದ್ದಾನೆ.
ಬಾರ್ನಲ್ಲಿ ರೂಮ್ ಬಾಡಿಗೆ ಪಡೆದು ಜೊತೆಯಲ್ಲೆ ಎಣ್ಣೆ ಹೊಡೆದಿದ್ದರು. ಕಂಠಪೂರ್ತಿ ಕುಡಿಸಿ ಪ್ರಜ್ಞೆ ತಪ್ಪಿದ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಬಾವ ವಿನೋದ್ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಎಫ್ಎಸ್ ಎಲ್ ತಂಡದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಮೇಟಗಳ್ಳಿ ಪೊಲೀಸರು ವಿನೋಧ್ಗೆ ಬಲೆ ಬೀಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…