ಮೈಸೂರು ನಗರ

35 ಲಕ್ಷ ರೂ ವಂಚನೆ ಆರೋಪ: ಪೊಲೀಸ್‌ ಪೇದೆ ಹಾಗೂ ಪತ್ನಿ ವಿರುದ್ಧ ಎಫ್‌ಐಆರ್‌

ಮೈಸೂರು: ವ್ಯವಹಾರದಲ್ಲಿ ಪಾಲುದಾರನ್ನಾಗಿ ಮಾಡಿಕೊಳ್ಳುವ ಆಮಿಷ ಒಡ್ಡಿ 35 ಲಕ್ಷ ರೂ ವಂಚನೆ ಮಾಡಿದ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸ್‌ ಪೇದೆ ಹಾಗೂ ಅವರ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮೇಟಗಳ್ಳಿ ಪೊಲೀಸ್‌ ಪೇದೆ ಪಿ.ಜೆ.ರಾಜು ಹಾಗೂ ಇವರ ಪತ್ನಿ ನಂದಿನಿ ಮೇಲೆ ಕೆ.ಆರ್.ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳುವ ಆಮಿಷ ನೀಡಿ 35 ಲಕ್ಷ ವಂಚಿಸಿದ್ದಾರೆ ಎಂದು ಆರೋಪಿಸಿ ವಂಚನೆಗೆ ಒಳಗಾದ ಮಹಾಲಕ್ಷ್ಮೀ, ಮಂಜುಳಾ ಹಾಗೂ ಸಿದ್ದೇಶ್‌ ಎಂಬುವವರು ದೂರು ನೀಡಿದ್ದರು.

ಇದನ್ನು ಓದಿ:  ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕಳೆದ 2022ರಲ್ಲಿ ಪೇದೆ ರಾಜು ಅಶೋಕಪುರಂ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮಹಾಲಕ್ಷ್ಮೀ, ಮಂಜುಳಾ ಹಾಗೂ ಸಿದ್ದೇಶ್‌ ಅವರ ಬಳಿ ಹಂತಹಂತವಾಗಿ 35 ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ.

ತಾನು ಪೇಪರ್‌ ಗ್ಲಾಸ್‌ ಜ್ಯೂಸ್‌ ಲೋಟ ಫ್ಯಾಕ್ಟರಿ ನಿರ್ವಹಿಸುತ್ತಿದ್ದೇನೆ. ಇದಕ್ಕೆ ನಿಮ್ಮನ್ನು ಪಾಲುದಾರರನ್ನಾಗಿ ಮಾಡಿಕೊಳ್ಳುತ್ತೇನೆ ಎಂದು ಆಮಿಷವೊಡ್ಡಿ 35 ಲಕ್ಷ ಹಣ ಪಡೆದು ವಂಚಿಸಿದ್ದಾರೆ. ನಮ್ಮ ಹಣ ವಾಪಸ್‌ ನೀಡುವಂತೆ ಹೋಗಿ ಮನವಿ ಮಾಡಿದಾಗ ನಾನು ಪೊಲೀಸ್‌ ಇಲಾಖೆಯಲ್ಲಿದ್ದೇನೆ ಎಂದು ರಾಜು ಬೆದರಿಸಿದ್ದಾರೆ. ಜೊತೆಗೆ ಅವರ ಪತ್ನಿ ನಂದಿನಿ ಅವರು ಮಹಾಲಕ್ಷ್ಮೀ ಅವರ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಜು ಈ ಹಿಂದೆ ಕಳ್ಳತನ ಆರೋಪಿಗಳ ಜೊತೆ ಶಾಮೀಲಾಗಿದ್ದರೆಂಬ ಆರೋಪದ ಮೇಲೆ ಅಮಾನತ್ತಾಗಿದ್ದರು. ನಂತರ ಮೇಟಗಳ್ಳಿ ಠಾಣೆಗೆ ನಿಯೋಜನೆಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

7 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

28 mins ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

45 mins ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

2 hours ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

5 hours ago