ಮೈಸೂರು ನಗರ

ಗುಡ್‌ ನ್ಯೂಸ್‌ ಯೂಟ್ಯೂಬ್ ಚಾನೆಲ್‌ನ ರಾಘವೇಂದ್ರ ವಿರುದ್ಧ ಎಫ್‌ಐಆರ್

ಮೈಸೂರು : ಗುಡ್ ನ್ಯೂಸ್ ಯೂಟ್ಯೂಬ್ ಚಾನೆಲ್ ಮಾಲೀಕ ರಾಘವೇಂದ್ರ ವಿರುದ್ಧ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೊದಲನೇ ಪ್ರಕರಣದಲ್ಲಿ ಸಮಾಜ ಸೇವಕ ವಾಜಮಂಗಲದ ಶಿವು ಎಂಬವರು ರಾಘವೇಂದ್ರ ಅವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ.30 ರಂದು ರಾಘವೇಂದ್ರ ಅವರು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುವಂತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಮೈಸೂರು | ಪೇದೆಯಿಂದ 35 ಲಕ್ಷ ರೂ. ವಂಚನೆ : ದೂರು

ಎರಡನೇ ಪ್ರಕರಣದಲ್ಲಿ ಓಂ ಸಾಯಿ ಟ್ರಸ್ಟ್‌ನಲ್ಲಿ ಸಹಾಯಕಳಾಗಿ ಕೆಲಸ ನಿರ್ವಹಿಸುತ್ತಿದ್ದ ಜಯಲಕ್ಷಿ ಎಂಬವರು ರಾಘವೇಂದ್ರ ವಿರುದ್ಧ ಜಾತಿ ನಿಂದನೆ ಹಾಗೂ ಅವಾಚ್ಯ ಪದ ಬಳಕೆಯ ಅಡಿಯಲ್ಲಿ ಡಿಸಿಆರ್‌ಇ ಪ್ರಾದೇಶಿಕ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ನ.9 ರಂದು ರಾಘವೇಂದ್ರ ಅವರು ನಮ್ಮ ಸಂಸ್ಥೆಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆಯ ರಾಣಿ ಪ್ರಭ ಅವರು ಕಾಫಿ ನೀಡುವಂತೆ ನನಗೆ ಹೇಳಿದರು. ನಾನು ಕಾಫಿ ಕೊಡಲು ಮುಂದಾದಾಗ ನೀನು ಕೀಳು ಜಾತಿಯವಳು ನನಗೆ ಕಾಫಿ ಕೊಡಲು ಬಂದಿದ್ದೀಯಾ ಎಂದು ನಿಂದಿಸಿದ್ದಲ್ಲದೆ, ನನ್ನನ್ನು ಕೈಗಳಿಂದ ದೂಡಿದರು. ಇಂತಹವರ ಕೈಲಿ ಕಾಫಿ ಕೊಡಿಸುತ್ತೀರಾ ಎಂದು ರಾಣಿ ಪ್ರಭ ಅವರಿಗೆ ನಿಂದಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

3 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

5 hours ago