ಮೈಸೂರು ನಗರ

ಗುಡ್‌ ನ್ಯೂಸ್‌ ಯೂಟ್ಯೂಬ್ ಚಾನೆಲ್‌ನ ರಾಘವೇಂದ್ರ ವಿರುದ್ಧ ಎಫ್‌ಐಆರ್

ಮೈಸೂರು : ಗುಡ್ ನ್ಯೂಸ್ ಯೂಟ್ಯೂಬ್ ಚಾನೆಲ್ ಮಾಲೀಕ ರಾಘವೇಂದ್ರ ವಿರುದ್ಧ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೊದಲನೇ ಪ್ರಕರಣದಲ್ಲಿ ಸಮಾಜ ಸೇವಕ ವಾಜಮಂಗಲದ ಶಿವು ಎಂಬವರು ರಾಘವೇಂದ್ರ ಅವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ.30 ರಂದು ರಾಘವೇಂದ್ರ ಅವರು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುವಂತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಮೈಸೂರು | ಪೇದೆಯಿಂದ 35 ಲಕ್ಷ ರೂ. ವಂಚನೆ : ದೂರು

ಎರಡನೇ ಪ್ರಕರಣದಲ್ಲಿ ಓಂ ಸಾಯಿ ಟ್ರಸ್ಟ್‌ನಲ್ಲಿ ಸಹಾಯಕಳಾಗಿ ಕೆಲಸ ನಿರ್ವಹಿಸುತ್ತಿದ್ದ ಜಯಲಕ್ಷಿ ಎಂಬವರು ರಾಘವೇಂದ್ರ ವಿರುದ್ಧ ಜಾತಿ ನಿಂದನೆ ಹಾಗೂ ಅವಾಚ್ಯ ಪದ ಬಳಕೆಯ ಅಡಿಯಲ್ಲಿ ಡಿಸಿಆರ್‌ಇ ಪ್ರಾದೇಶಿಕ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ನ.9 ರಂದು ರಾಘವೇಂದ್ರ ಅವರು ನಮ್ಮ ಸಂಸ್ಥೆಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆಯ ರಾಣಿ ಪ್ರಭ ಅವರು ಕಾಫಿ ನೀಡುವಂತೆ ನನಗೆ ಹೇಳಿದರು. ನಾನು ಕಾಫಿ ಕೊಡಲು ಮುಂದಾದಾಗ ನೀನು ಕೀಳು ಜಾತಿಯವಳು ನನಗೆ ಕಾಫಿ ಕೊಡಲು ಬಂದಿದ್ದೀಯಾ ಎಂದು ನಿಂದಿಸಿದ್ದಲ್ಲದೆ, ನನ್ನನ್ನು ಕೈಗಳಿಂದ ದೂಡಿದರು. ಇಂತಹವರ ಕೈಲಿ ಕಾಫಿ ಕೊಡಿಸುತ್ತೀರಾ ಎಂದು ರಾಣಿ ಪ್ರಭ ಅವರಿಗೆ ನಿಂದಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

5 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

11 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago