ಮೈಸೂರು ನಗರ

ಗುಡ್‌ ನ್ಯೂಸ್‌ ಯೂಟ್ಯೂಬ್ ಚಾನೆಲ್‌ನ ರಾಘವೇಂದ್ರ ವಿರುದ್ಧ ಎಫ್‌ಐಆರ್

ಮೈಸೂರು : ಗುಡ್ ನ್ಯೂಸ್ ಯೂಟ್ಯೂಬ್ ಚಾನೆಲ್ ಮಾಲೀಕ ರಾಘವೇಂದ್ರ ವಿರುದ್ಧ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೊದಲನೇ ಪ್ರಕರಣದಲ್ಲಿ ಸಮಾಜ ಸೇವಕ ವಾಜಮಂಗಲದ ಶಿವು ಎಂಬವರು ರಾಘವೇಂದ್ರ ಅವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ.30 ರಂದು ರಾಘವೇಂದ್ರ ಅವರು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುವಂತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಮೈಸೂರು | ಪೇದೆಯಿಂದ 35 ಲಕ್ಷ ರೂ. ವಂಚನೆ : ದೂರು

ಎರಡನೇ ಪ್ರಕರಣದಲ್ಲಿ ಓಂ ಸಾಯಿ ಟ್ರಸ್ಟ್‌ನಲ್ಲಿ ಸಹಾಯಕಳಾಗಿ ಕೆಲಸ ನಿರ್ವಹಿಸುತ್ತಿದ್ದ ಜಯಲಕ್ಷಿ ಎಂಬವರು ರಾಘವೇಂದ್ರ ವಿರುದ್ಧ ಜಾತಿ ನಿಂದನೆ ಹಾಗೂ ಅವಾಚ್ಯ ಪದ ಬಳಕೆಯ ಅಡಿಯಲ್ಲಿ ಡಿಸಿಆರ್‌ಇ ಪ್ರಾದೇಶಿಕ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ನ.9 ರಂದು ರಾಘವೇಂದ್ರ ಅವರು ನಮ್ಮ ಸಂಸ್ಥೆಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆಯ ರಾಣಿ ಪ್ರಭ ಅವರು ಕಾಫಿ ನೀಡುವಂತೆ ನನಗೆ ಹೇಳಿದರು. ನಾನು ಕಾಫಿ ಕೊಡಲು ಮುಂದಾದಾಗ ನೀನು ಕೀಳು ಜಾತಿಯವಳು ನನಗೆ ಕಾಫಿ ಕೊಡಲು ಬಂದಿದ್ದೀಯಾ ಎಂದು ನಿಂದಿಸಿದ್ದಲ್ಲದೆ, ನನ್ನನ್ನು ಕೈಗಳಿಂದ ದೂಡಿದರು. ಇಂತಹವರ ಕೈಲಿ ಕಾಫಿ ಕೊಡಿಸುತ್ತೀರಾ ಎಂದು ರಾಣಿ ಪ್ರಭ ಅವರಿಗೆ ನಿಂದಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago