rowdy sheeter avva madhesh
ಮೈಸೂರು: ಹಫ್ತ ಕೇಳಿದ ರೌಡಿ ಶೀಟರ್ ಅವ್ವ ಮಾದೇಶ್ (Rowdy Sheeter Avva Madhesh) ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃಷ್ಣಕಾಮಿ ರೆಡ್ಡಿ ಎಂಬಾತನಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
ಗೋಕುಲಂ ಬಡಾವಣೆಯಲ್ಲಿ ಬರಿಸ್ಥಾ ಕೆಫೆ ತೆರೆಯಲು ಮಂಚೇಗೌಡನಕೊಪ್ಪಲಿನ ನಿವಾಸಿ ರೆಡ್ಡಿ ಮುಂದಾಗಿದ್ದರು. ಈ ವೇಳೆ ಕೆಫೆ ಆರಂಭಿಸಬೇಕಾದರೆ 5 ಲಕ್ಷ ರೂ ಹಣ ನೀಡಬೇಕು ಎಂದು ಅವ್ವ ಮಾದೇಶ್ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಾಗು ಎಂಬಾತ ಬಿಲ್ಡಿಂಗ್ ಬಳಿ ಬಂದು ಗಲಾಟೆ ಮಾಡಿದ್ದಲ್ಲದೇ, ಅವ್ವ ಮಾದೇಶ್ ದೂರವಾಣಿ ಮೂಲಕ ಹೆದರಿಸಿದ್ದ ಎನ್ನಲಾಗಿದೆ. ಮನೆಗೆ ಬಾ ಎಂದು ಧಮ್ಕಿ ಹಾಕಿದ್ದು, ಐದು ಲಕ್ಷ ಕೊಡುವವರೆಗೆ ಕೆಲಸ ಮಾಡಲು ಬಿಡಲ್ಲ ಎಂದು ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಲಂ 308(2) ರೆವಿ 3/4 ಭಾರತೀಯ ನ್ಯಾಯ ಸಂಹಿತೆ ಪ್ರಕಾರ ದೂರು ದಾಖಲಾಗಿದೆ.
ಇನ್ನು ಅವ್ವ ಮಾದೇಶ ಹುಣಸೂರಿನ ಜೋಡಿ ಕೊಲೆ ಆರೋಪಿಯಾಗಿದ್ದು, ಪಡುವಾರಹಳ್ಳಿ ದೇವು ಮರ್ಡರ್ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಪರಿಣಾಮ ಹಲವು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿದ್ದಾನೆ.
ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…
ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು. ಮಂಡ್ಯ ನಗರದ…
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…
ಚಾಮರಾಜನಗರ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…
ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…
ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…