rowdy sheeter avva madhesh
ಮೈಸೂರು: ಹಫ್ತ ಕೇಳಿದ ರೌಡಿ ಶೀಟರ್ ಅವ್ವ ಮಾದೇಶ್ (Rowdy Sheeter Avva Madhesh) ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃಷ್ಣಕಾಮಿ ರೆಡ್ಡಿ ಎಂಬಾತನಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
ಗೋಕುಲಂ ಬಡಾವಣೆಯಲ್ಲಿ ಬರಿಸ್ಥಾ ಕೆಫೆ ತೆರೆಯಲು ಮಂಚೇಗೌಡನಕೊಪ್ಪಲಿನ ನಿವಾಸಿ ರೆಡ್ಡಿ ಮುಂದಾಗಿದ್ದರು. ಈ ವೇಳೆ ಕೆಫೆ ಆರಂಭಿಸಬೇಕಾದರೆ 5 ಲಕ್ಷ ರೂ ಹಣ ನೀಡಬೇಕು ಎಂದು ಅವ್ವ ಮಾದೇಶ್ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಾಗು ಎಂಬಾತ ಬಿಲ್ಡಿಂಗ್ ಬಳಿ ಬಂದು ಗಲಾಟೆ ಮಾಡಿದ್ದಲ್ಲದೇ, ಅವ್ವ ಮಾದೇಶ್ ದೂರವಾಣಿ ಮೂಲಕ ಹೆದರಿಸಿದ್ದ ಎನ್ನಲಾಗಿದೆ. ಮನೆಗೆ ಬಾ ಎಂದು ಧಮ್ಕಿ ಹಾಕಿದ್ದು, ಐದು ಲಕ್ಷ ಕೊಡುವವರೆಗೆ ಕೆಲಸ ಮಾಡಲು ಬಿಡಲ್ಲ ಎಂದು ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಲಂ 308(2) ರೆವಿ 3/4 ಭಾರತೀಯ ನ್ಯಾಯ ಸಂಹಿತೆ ಪ್ರಕಾರ ದೂರು ದಾಖಲಾಗಿದೆ.
ಇನ್ನು ಅವ್ವ ಮಾದೇಶ ಹುಣಸೂರಿನ ಜೋಡಿ ಕೊಲೆ ಆರೋಪಿಯಾಗಿದ್ದು, ಪಡುವಾರಹಳ್ಳಿ ದೇವು ಮರ್ಡರ್ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಪರಿಣಾಮ ಹಲವು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿದ್ದಾನೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…