ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ ರಾಶಿ ಹೊತ್ತಿ ಉರಿದ ಘಟನೆ ನಡೆದಿದೆ.
ಬಿಸಿಲಿನ ತೀವ್ರತೆಯಿಂದಾಗಿ ಕಸ ವಿಲೇವಾರಿ ಶೆಡ್ಗಳ ಒಳಭಾಗದಲ್ಲಿದ್ದ ಕಸದ ರಾಶಿಗೆ ಬೆಂಕಿ ತಗುಲಿ, ಕೆಲವೇ ಕ್ಷಣಗಳಲ್ಲಿ ದೊಡ್ಡ ಮಟ್ಟಕ್ಕೆ ವ್ಯಾಪಿಸಿದೆ.
ಬೆಂಕಿಯಿಂದ ಉಂಟಾದ ದಟ್ಟ ಹೊಗೆ ಹಳೆ ಕೆಸರೆ, ಕಾಮನಕೆರೆಹುಂಡಿ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಿಗೆ ವ್ಯಾಪಿಸಿ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು ಆದರೆ ಅಪಾರ ಪ್ರಮಾಣದ ಕಸದ ರಾಶಿ ಇರುವುದರಿಂದ ಬೆಂಕಿ ಸಂಪೂರ್ಣ ಹತೋಟಿಗೆ ತರುವುದು ಸ್ವಲ್ಪ ತಡವಾಯಿತು.
ಇದರಿಂದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳು ಹೊಗೆ ವ್ಯಾಪಿಸಿದ ಭಯಭೀತರಾಗಿದ್ದರು. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…